ಸಾರಿಗೆ ಬಸ್ ಸ್ವಿಫ್ಟ್ ಕಾರು ಢಿಕ್ಕಿ…ಗ್ರಾ.ಪಂ.ಸದಸ್ಯ ಸ್ಥಳದಲ್ಲೇ ಸಾವು…ಮೂವರಿಗೆ ಗಂಭೀರ ಗಾಯ…
- CrimeMysore
- June 11, 2023
- No Comment
- 157
ಹುಣಸೂರು,ಜೂ11,Tv10 ಕನ್ನಡ
ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.ನಿಲುವಾಗಿಲು ಗ್ರಾಮ ಪಂಚಾಯ್ತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದ ಪತ್ನಿ,ತಾಯಿ ಹಾಗು ಪುತ್ರ ತೀವ್ರವಾಗಿ ಗಾಯಗೊಂಡಿದ್ದಾರೆ. ಭಾಸ್ಕರ್ ಕಾರು ಚಾಲನೆ ಮಾಡುತ್ತಿದ್ದರು. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಹುಣಸೂರು ಡಿಪೋ ಮೇನೇಜರ್ , ಹಾಗೂ ಬಿಳಿಕೆರೆ ಪೊಲೀಸ್ ಠಾಣೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…