ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ…

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ…

ಮೈಸೂರು,ಜೂ12,Tv10 ಕನ್ನಡ
ಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಇಂದು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರುನ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿತಾ ರಾಜಾರಾಮ್ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500 ಜನರಿಂದ ಸಾಂಕೇತಿಕ ಯೋಗ ಪ್ರದರ್ಶನ ಹಾಗೂ ನಗರದ ಅರಮನೆಯ ಮೈದಾನದಲ್ಲಿ 12 ಸಾವಿರ ಜನರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜೂನ್ 21 ರಂದು ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಯೋಗ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಮ್ಯಾಟ್ ಗಳನ್ನು ಪೂರೈಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯೋಗ ದಿನಾಚರಣೆಯಲ್ಲಿ ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸುವುದು ಹಾಗೂ ಯೋಗ ಮ್ಯಾಟ್ ಅವರೇ ತರಬೇಕು ಎಂದು ತಿಳಿಸಿದರು. ಜೂನ್ 18 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಿಹರ್ಸೆಲ್ ನಡೆಯಲಿದ್ದು ಆಸಕ್ತರು ಆ ದಿನವೂ ಭಾಗವಹಿಸಬಹುದು. ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಶೌಚಾಲಯ, ಫೈಯರ್, ಕುಡಿಯುವ ನೀರು ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಯೋಗ ಸಂಸ್ಥೆಗಳು, ಆಯುಷ್ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎನ್ಎಸ್ಎಸ್ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಗ ತರಬೇತುದಾರರು ಇವರೆಲ್ಲರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.ಸಭೆಯಲ್ಲಿ ಯೋಗಭ್ಯಾಸದ ಅಭ್ಯಾಸ ಪಟ್ಟಿಯನ್ನು ಅಪರ ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಆಯುಷ್ ಇಲಾಖೆಯ ಅಧಿಕಾರಿ ಡಾ ಪುಷ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *