ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ…

ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ…

ಮೈಸೂರು,ಜೂನ್ 17,Tv10 ಕನ್ನಡ
ಅಧಿಕಾರಿಗಳು ಪಾರದರ್ಶಕವಾಗಿ ಪ್ರಾಮಾಣಿಕವಾಗಿ, ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ ರಾದ ಕೆ. ಎನ್. ಫಣೀಂದ್ರ ಅವರು ಕಿವಿಮಾತು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ 3 ಅಂಗಗಳು ತಮ್ಮ ಕಾರ್ಯಗಳನ್ನು ನ್ಯಾಯುತವಾಗಿ ಮಾಡಬೇಕು.ಶಾಸಕಾಂಗ ಕಾನೂನುಗಳನ್ನು ರಚಿಸಿದರೆ, ಆ ಕಾನೂನುಗಳನ್ನು ಕಾರ್ಯಾಂಗ ಜಾರಿಗೆ ತಂದು ಜನರಿಗೆ ತಲುಪಿಸುತ್ತದೆ. ಜನರಿಗೆ ನೀಡಿರುವ ಕಾನೂನು, ಹಕ್ಕುಗಳ ಉಲ್ಲಂಘನೆಗೆ ಅಧಾಗ ನ್ಯಾಯಾಂಗ ಇದನ್ನು ಸರಿಪಡಿಸುವ ಕಾರ್ಯ ಮಾಡುತ್ತದೆ. ಮಾಧ್ಯಮವು ಈ ಮೂರು ಅಂಗಗಳು ಮಾಡುವ ತಪ್ಪುಗಳನ್ನು ಗಮನಕ್ಕೆ ತಂದು ಸರಿಪಡಿಸುವ ಕಾರ್ಯಕ್ಕೆ ಸಹಕರಿಸುತ್ತದೆ.
ಎಲ್ಲೆಲ್ಲಿ ಕಾರ್ಯಾಂಗ, ಶಾಸಕಾಂಗ ತಪ್ಪು ದಾರಿ ಹಿಡಿದು ಕಾನೂನು ಉಲ್ಲಂಘನೆ ಮಾಡಿದರೆ, ಕರ್ತವ್ಯ ಲೋಪ ಎಸಗಿದರೆ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತದೆ. ಲೋಕಾಯುಕ್ತ ಸಂಸ್ಥೆ ಕರ್ತವ್ಯ ಲೋಪ ಪರಿಶೀಲಿಸಿ ಕರ್ತವ್ಯ ಲೋಪ ಎಸಗಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದರು.ಅಧಿಕಾರಿಗಳು ಆತ್ಮ ಸಾಕ್ಷಿಗೆ ಅನುಗುಣವಾಗಿಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತಲುಪಬೇಕಾದ ಸವಲತ್ತುಗಳನ್ನು ನ್ಯಾಯಯುತವಾಗಿ ಸಕಾಲದಲ್ಲಿ ತಲುಪಿಸಬೇಕು.
ಲೋಕಾಯುಕ್ತಕ್ಕೆ ದೂರನ್ನು ನೀಡಬೇಕು ಎಂದೇ ಇಲ್ಲಾ, ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು. ಅನಾವಶ್ಯಕವಾಗಿ ಸುಳ್ಳು ದೂರುಗಳನ್ನು ಸಲ್ಲಿಸಿದರೆ ಸುಳ್ಳು ದೂರು ಸಲ್ಲಿಸುವವರನ್ನು 6 ತಿಂಗಳು ಜೈಲಿಗೆ ಕಳುಹಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಿ, ಸಂಬಂದಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚನ್ನಕೇಶವ ರೆಡ್ಡಿ, ಅಪರ ನಿಬಂಧಕರಾದ ಶಿವಕುಮಾರ್ ಬಿ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್. ಪಿ. ಸುರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯಿತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಅವರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *