ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ…

ಪ್ರಾಮಾಣಿಕವಾಗಿ, ಪಾರದರ್ಶಕವಾಗಿ,ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಿ…ಅಧಿಕಾರಿಗಳಿಗೆ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಕರೆ…

ಮೈಸೂರು,ಜೂನ್ 17,Tv10 ಕನ್ನಡ
ಅಧಿಕಾರಿಗಳು ಪಾರದರ್ಶಕವಾಗಿ ಪ್ರಾಮಾಣಿಕವಾಗಿ, ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ ರಾದ ಕೆ. ಎನ್. ಫಣೀಂದ್ರ ಅವರು ಕಿವಿಮಾತು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ 3 ಅಂಗಗಳು ತಮ್ಮ ಕಾರ್ಯಗಳನ್ನು ನ್ಯಾಯುತವಾಗಿ ಮಾಡಬೇಕು.ಶಾಸಕಾಂಗ ಕಾನೂನುಗಳನ್ನು ರಚಿಸಿದರೆ, ಆ ಕಾನೂನುಗಳನ್ನು ಕಾರ್ಯಾಂಗ ಜಾರಿಗೆ ತಂದು ಜನರಿಗೆ ತಲುಪಿಸುತ್ತದೆ. ಜನರಿಗೆ ನೀಡಿರುವ ಕಾನೂನು, ಹಕ್ಕುಗಳ ಉಲ್ಲಂಘನೆಗೆ ಅಧಾಗ ನ್ಯಾಯಾಂಗ ಇದನ್ನು ಸರಿಪಡಿಸುವ ಕಾರ್ಯ ಮಾಡುತ್ತದೆ. ಮಾಧ್ಯಮವು ಈ ಮೂರು ಅಂಗಗಳು ಮಾಡುವ ತಪ್ಪುಗಳನ್ನು ಗಮನಕ್ಕೆ ತಂದು ಸರಿಪಡಿಸುವ ಕಾರ್ಯಕ್ಕೆ ಸಹಕರಿಸುತ್ತದೆ.
ಎಲ್ಲೆಲ್ಲಿ ಕಾರ್ಯಾಂಗ, ಶಾಸಕಾಂಗ ತಪ್ಪು ದಾರಿ ಹಿಡಿದು ಕಾನೂನು ಉಲ್ಲಂಘನೆ ಮಾಡಿದರೆ, ಕರ್ತವ್ಯ ಲೋಪ ಎಸಗಿದರೆ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತದೆ. ಲೋಕಾಯುಕ್ತ ಸಂಸ್ಥೆ ಕರ್ತವ್ಯ ಲೋಪ ಪರಿಶೀಲಿಸಿ ಕರ್ತವ್ಯ ಲೋಪ ಎಸಗಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದರು.ಅಧಿಕಾರಿಗಳು ಆತ್ಮ ಸಾಕ್ಷಿಗೆ ಅನುಗುಣವಾಗಿಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತಲುಪಬೇಕಾದ ಸವಲತ್ತುಗಳನ್ನು ನ್ಯಾಯಯುತವಾಗಿ ಸಕಾಲದಲ್ಲಿ ತಲುಪಿಸಬೇಕು.
ಲೋಕಾಯುಕ್ತಕ್ಕೆ ದೂರನ್ನು ನೀಡಬೇಕು ಎಂದೇ ಇಲ್ಲಾ, ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು. ಅನಾವಶ್ಯಕವಾಗಿ ಸುಳ್ಳು ದೂರುಗಳನ್ನು ಸಲ್ಲಿಸಿದರೆ ಸುಳ್ಳು ದೂರು ಸಲ್ಲಿಸುವವರನ್ನು 6 ತಿಂಗಳು ಜೈಲಿಗೆ ಕಳುಹಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಿ, ಸಂಬಂದಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚನ್ನಕೇಶವ ರೆಡ್ಡಿ, ಅಪರ ನಿಬಂಧಕರಾದ ಶಿವಕುಮಾರ್ ಬಿ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್. ಪಿ. ಸುರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯಿತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಅವರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *