ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ…

ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ…

ಮೈಸೂರು,ಜೂ18,Tv10 ಕನ್ನಡ
ನಗರದ ಕೆ. ಆರ್. ಆಸ್ಪತ್ರೆ ಹಾಗೂ ಬಾಲಮಂದಿರಕ್ಕೆ ಉಪ ಲೋಕಾಯುಕ್ತರಾದ ಫಣೀಂದ್ರ ಅವರು ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು


ವಾರ್ಡ್ ಗಳು ಹಾಗೂ ಆಪರೇಷನ್ ಥಿಯೇಟರ್‌ಗಳು ಮತ್ತು ಇತರೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಔಷಧಗಳ ದಾಸ್ತಾನು ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಇಲ್ಲದಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವಂತೆ ತಿಳಿಸಿದರು.ಬಳಿಕ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರ ಕುಂದುಕೊರತೆಗಳ ಆಲಿಸಿದರು.

ಇದೇ ವೇಖೆ ಬಾಲಕೀಯರ ಬಾಲ ಮಂದಿರ
ನಂತರ ಮಹಿಳಾ ಮತ್ತು ಮಕ್ಕಳ ಇಲಾಖೆಯ ಬಾಲಕೀಯರ ಬಾಲ ಮಂದಿರ ಭೇಟಿ ನೀಡಿದ ಉಪ ಲೋಕಾಯುಕ್ತರು ಬಾಲಕಿಯರ ಮಂದಿರದಲ್ಲಿ ಉತ್ತಮವಾದ ವಾತಾವರಣ ನಿರ್ಮಾಣ ಮಾಡಬೇಕು.ಮಕ್ಕಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಒಡೆಯುವುದು, ಗುಣಮಟ್ಟದ ಆಹಾರ ನೀಡವುದು, ಶೌಚಾಲಯದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಿದ ಬಗ್ಗೆ15 ದಿನದೊಳಗೆ ವರದಿ ನೀಡುವಂತೆ ಸೂಚಿಸಿದರು.

ಮಕ್ಕಳಿಗೆ ಬೇಕಾದ ಮೂಲ ಭೂತ ಸೌಕರ್ಯಗಳನ್ನು ನೀಡಬೇಕು. ಹಾಗೂ ಅವರಿಗೆ ಬೇಕಾದ ಆಟದ ಸಲಕರಣೆಗಳನ್ನು ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ನಗರದ ವಿಜಯ ನಗರ ನಾಲ್ಕನೇ ಹಂತದಲ್ಲಿರುವ ಬಾಲ ಮಂದಿರಕ್ಕೂ ಭೇಟಿ ನೀಡಿ ಮಕ್ಕಳಿಗೆ ಉತ್ತಮ ಆಹಾರ, ನೀರು ಹಾಗೂ ಮೂಲಭೂತ ಸೌಕರ್ಯ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚೆನ್ನಕೇಶವ ರೆಡ್ಜಿ, ಅಪರ ನಿಬಂಧಕರಾದ ಶಿವಕುಮಾರ್ ಬಿ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *