ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಎಚ್.ಡಿ.ಕೋಟೆ,ಜೂ 19,Tv10 ಕನ್ನಡ


ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ನಲ್ಲಿರುವ ಮೈಸೂರು ಒಡೆಯರ್ ಚನ್ನಯ್ಯನ ಕಟ್ಟೆ ಕೆರೆ ಒತ್ತುವರಿ ಆರೋಪ ಕೇಳಿ ಬಂದಿದೆ. ತಡೆಯಲು ಹೋದ ಗ್ರಾಮಸ್ಥರೊಂದಿಗೆ ಒತ್ತುವರಿದಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೆರೆ ಜಾಗ ಉಳುಮೆ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿ ಕೆ.ಯಡತೊರೆ ಗ್ರಾಮದ ಸರ್ವೆ ನಂ.46 ರಲ್ಲಿರು 8.10 ಎಕ್ರೆ ಜಮೀನು ಚನ್ನಯ್ಯನ ಕಟ್ಟೆ ಕೆರೆ ಆಗಿದೆ.ಈ ಕೆರೆಯ ಅಂಚನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.ಇದನ್ನ ತಡೆಯಲು ಹೋದ ಗ್ರಾಮಸ್ಥರ ವಿರುದ್ದ ಒತ್ತುವರಿದಾರರು ತಿರುಗಿ ಬಿದ್ದಿದ್ದಾರೆ.ಒತ್ತುವರಿ ಜಾಗದಲ್ಲಿ ಉಳುಮೆ ಮಾಡುವ ಯತ್ನ ನಡೆದಾಗ ಗ್ರಾಮಸ್ಥರು ತಡೆ ಹಿಡಿದಿದ್ದಾರೆ. ಇತ್ತೀಚೆಗಷ್ಟೆ ತಹಸೀಲ್ದಾರ್ ಸೂಚನೆ ನೀಡಿದ್ದರೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ದಾಖಲಾತಿಗಳಿದ್ದರೂ ರಾಜವಂಶಸ್ಥರ ಕಾಲದ ಕೆರೆ ಉಳಿವಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೆ ಕೆರೆಯ ಬಹುತೇಕ ಜಾಗ ಉಳುಮೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.
ವನ್ಯಜೀವಿಗಳು ಜನ ಜಾನುವಾರುಗಳ ನೀರಿನ ದಾಹ ತಣಿಸಲು ನಿರ್ಮಾಣವಾಗಿರಯವ ಕೆರೆ ಇದೀಗ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಈ ಕೆರೆಯ ಉಳಿವಿಗಾಗಿ ಹುಣಸೂರು ಉಪವಿಭಾಗಾಧಿಕಾರಿಗಳು ಸಾಕಷ್ಟು ಬಾರಿ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.ಹೀಗಿದ್ದರೂ ಒತ್ತುವರಿ ಹೆಚ್ಚಾಗುತ್ತಲೇ ಇದೆ.ಮಾಹಿತಿ ಅರಿತ ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ತಹಸೀಲ್ದಾರ್ ಮಹೇಶ್ ಸೂಚನೆಯಂತೆ ನಾಮಪಲಕ ಇಲ್ಲದ ಜೆಸಿಬಿ ವಶಕ್ಕೆ ತೆಗೆದುಕೊಂಡಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *