ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಎಚ್.ಡಿ.ಕೋಟೆ,ಜೂ 19,Tv10 ಕನ್ನಡ


ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ನಲ್ಲಿರುವ ಮೈಸೂರು ಒಡೆಯರ್ ಚನ್ನಯ್ಯನ ಕಟ್ಟೆ ಕೆರೆ ಒತ್ತುವರಿ ಆರೋಪ ಕೇಳಿ ಬಂದಿದೆ. ತಡೆಯಲು ಹೋದ ಗ್ರಾಮಸ್ಥರೊಂದಿಗೆ ಒತ್ತುವರಿದಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೆರೆ ಜಾಗ ಉಳುಮೆ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿ ಕೆ.ಯಡತೊರೆ ಗ್ರಾಮದ ಸರ್ವೆ ನಂ.46 ರಲ್ಲಿರು 8.10 ಎಕ್ರೆ ಜಮೀನು ಚನ್ನಯ್ಯನ ಕಟ್ಟೆ ಕೆರೆ ಆಗಿದೆ.ಈ ಕೆರೆಯ ಅಂಚನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.ಇದನ್ನ ತಡೆಯಲು ಹೋದ ಗ್ರಾಮಸ್ಥರ ವಿರುದ್ದ ಒತ್ತುವರಿದಾರರು ತಿರುಗಿ ಬಿದ್ದಿದ್ದಾರೆ.ಒತ್ತುವರಿ ಜಾಗದಲ್ಲಿ ಉಳುಮೆ ಮಾಡುವ ಯತ್ನ ನಡೆದಾಗ ಗ್ರಾಮಸ್ಥರು ತಡೆ ಹಿಡಿದಿದ್ದಾರೆ. ಇತ್ತೀಚೆಗಷ್ಟೆ ತಹಸೀಲ್ದಾರ್ ಸೂಚನೆ ನೀಡಿದ್ದರೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ದಾಖಲಾತಿಗಳಿದ್ದರೂ ರಾಜವಂಶಸ್ಥರ ಕಾಲದ ಕೆರೆ ಉಳಿವಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೆ ಕೆರೆಯ ಬಹುತೇಕ ಜಾಗ ಉಳುಮೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.
ವನ್ಯಜೀವಿಗಳು ಜನ ಜಾನುವಾರುಗಳ ನೀರಿನ ದಾಹ ತಣಿಸಲು ನಿರ್ಮಾಣವಾಗಿರಯವ ಕೆರೆ ಇದೀಗ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಈ ಕೆರೆಯ ಉಳಿವಿಗಾಗಿ ಹುಣಸೂರು ಉಪವಿಭಾಗಾಧಿಕಾರಿಗಳು ಸಾಕಷ್ಟು ಬಾರಿ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.ಹೀಗಿದ್ದರೂ ಒತ್ತುವರಿ ಹೆಚ್ಚಾಗುತ್ತಲೇ ಇದೆ.ಮಾಹಿತಿ ಅರಿತ ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ತಹಸೀಲ್ದಾರ್ ಮಹೇಶ್ ಸೂಚನೆಯಂತೆ ನಾಮಪಲಕ ಇಲ್ಲದ ಜೆಸಿಬಿ ವಶಕ್ಕೆ ತೆಗೆದುಕೊಂಡಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *