ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಎಚ್.ಡಿ.ಕೋಟೆ,ಜೂ 19,Tv10 ಕನ್ನಡ


ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ನಲ್ಲಿರುವ ಮೈಸೂರು ಒಡೆಯರ್ ಚನ್ನಯ್ಯನ ಕಟ್ಟೆ ಕೆರೆ ಒತ್ತುವರಿ ಆರೋಪ ಕೇಳಿ ಬಂದಿದೆ. ತಡೆಯಲು ಹೋದ ಗ್ರಾಮಸ್ಥರೊಂದಿಗೆ ಒತ್ತುವರಿದಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೆರೆ ಜಾಗ ಉಳುಮೆ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿ ಕೆ.ಯಡತೊರೆ ಗ್ರಾಮದ ಸರ್ವೆ ನಂ.46 ರಲ್ಲಿರು 8.10 ಎಕ್ರೆ ಜಮೀನು ಚನ್ನಯ್ಯನ ಕಟ್ಟೆ ಕೆರೆ ಆಗಿದೆ.ಈ ಕೆರೆಯ ಅಂಚನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.ಇದನ್ನ ತಡೆಯಲು ಹೋದ ಗ್ರಾಮಸ್ಥರ ವಿರುದ್ದ ಒತ್ತುವರಿದಾರರು ತಿರುಗಿ ಬಿದ್ದಿದ್ದಾರೆ.ಒತ್ತುವರಿ ಜಾಗದಲ್ಲಿ ಉಳುಮೆ ಮಾಡುವ ಯತ್ನ ನಡೆದಾಗ ಗ್ರಾಮಸ್ಥರು ತಡೆ ಹಿಡಿದಿದ್ದಾರೆ. ಇತ್ತೀಚೆಗಷ್ಟೆ ತಹಸೀಲ್ದಾರ್ ಸೂಚನೆ ನೀಡಿದ್ದರೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ದಾಖಲಾತಿಗಳಿದ್ದರೂ ರಾಜವಂಶಸ್ಥರ ಕಾಲದ ಕೆರೆ ಉಳಿವಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೆ ಕೆರೆಯ ಬಹುತೇಕ ಜಾಗ ಉಳುಮೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.
ವನ್ಯಜೀವಿಗಳು ಜನ ಜಾನುವಾರುಗಳ ನೀರಿನ ದಾಹ ತಣಿಸಲು ನಿರ್ಮಾಣವಾಗಿರಯವ ಕೆರೆ ಇದೀಗ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಈ ಕೆರೆಯ ಉಳಿವಿಗಾಗಿ ಹುಣಸೂರು ಉಪವಿಭಾಗಾಧಿಕಾರಿಗಳು ಸಾಕಷ್ಟು ಬಾರಿ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.ಹೀಗಿದ್ದರೂ ಒತ್ತುವರಿ ಹೆಚ್ಚಾಗುತ್ತಲೇ ಇದೆ.ಮಾಹಿತಿ ಅರಿತ ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ತಹಸೀಲ್ದಾರ್ ಮಹೇಶ್ ಸೂಚನೆಯಂತೆ ನಾಮಪಲಕ ಇಲ್ಲದ ಜೆಸಿಬಿ ವಶಕ್ಕೆ ತೆಗೆದುಕೊಂಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *