ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಎಚ್.ಡಿ.ಕೋಟೆ,ಜೂ 19,Tv10 ಕನ್ನಡ


ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ನಲ್ಲಿರುವ ಮೈಸೂರು ಒಡೆಯರ್ ಚನ್ನಯ್ಯನ ಕಟ್ಟೆ ಕೆರೆ ಒತ್ತುವರಿ ಆರೋಪ ಕೇಳಿ ಬಂದಿದೆ. ತಡೆಯಲು ಹೋದ ಗ್ರಾಮಸ್ಥರೊಂದಿಗೆ ಒತ್ತುವರಿದಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೆರೆ ಜಾಗ ಉಳುಮೆ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿ ಕೆ.ಯಡತೊರೆ ಗ್ರಾಮದ ಸರ್ವೆ ನಂ.46 ರಲ್ಲಿರು 8.10 ಎಕ್ರೆ ಜಮೀನು ಚನ್ನಯ್ಯನ ಕಟ್ಟೆ ಕೆರೆ ಆಗಿದೆ.ಈ ಕೆರೆಯ ಅಂಚನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.ಇದನ್ನ ತಡೆಯಲು ಹೋದ ಗ್ರಾಮಸ್ಥರ ವಿರುದ್ದ ಒತ್ತುವರಿದಾರರು ತಿರುಗಿ ಬಿದ್ದಿದ್ದಾರೆ.ಒತ್ತುವರಿ ಜಾಗದಲ್ಲಿ ಉಳುಮೆ ಮಾಡುವ ಯತ್ನ ನಡೆದಾಗ ಗ್ರಾಮಸ್ಥರು ತಡೆ ಹಿಡಿದಿದ್ದಾರೆ. ಇತ್ತೀಚೆಗಷ್ಟೆ ತಹಸೀಲ್ದಾರ್ ಸೂಚನೆ ನೀಡಿದ್ದರೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ದಾಖಲಾತಿಗಳಿದ್ದರೂ ರಾಜವಂಶಸ್ಥರ ಕಾಲದ ಕೆರೆ ಉಳಿವಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೆ ಕೆರೆಯ ಬಹುತೇಕ ಜಾಗ ಉಳುಮೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.
ವನ್ಯಜೀವಿಗಳು ಜನ ಜಾನುವಾರುಗಳ ನೀರಿನ ದಾಹ ತಣಿಸಲು ನಿರ್ಮಾಣವಾಗಿರಯವ ಕೆರೆ ಇದೀಗ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಈ ಕೆರೆಯ ಉಳಿವಿಗಾಗಿ ಹುಣಸೂರು ಉಪವಿಭಾಗಾಧಿಕಾರಿಗಳು ಸಾಕಷ್ಟು ಬಾರಿ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.ಹೀಗಿದ್ದರೂ ಒತ್ತುವರಿ ಹೆಚ್ಚಾಗುತ್ತಲೇ ಇದೆ.ಮಾಹಿತಿ ಅರಿತ ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ತಹಸೀಲ್ದಾರ್ ಮಹೇಶ್ ಸೂಚನೆಯಂತೆ ನಾಮಪಲಕ ಇಲ್ಲದ ಜೆಸಿಬಿ ವಶಕ್ಕೆ ತೆಗೆದುಕೊಂಡಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *