,ಹಿರಿಯ ನಾಗರೀಕರಿಗೆ ದೇವಾಲಯಗಳಲ್ಲಿ ನೇರ ದರ್ಶನ ಸೌಲಭ್ಯ…ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ…,
- TV10 Kannada Exclusive
- June 21, 2023
- No Comment
- 82
ಮೈಸೂರು,ಜೂ21,Tv10 ಕನ್ನಡ
ಧಾರ್ಮಿಕದತ್ತಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ನೇರವಾಗಿ ದರುಶನ ವ್ಯವಸ್ಥೆ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಸರತಿ ಸಾಲಿನಲ್ಲಿ ನಿಂತು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಹಿನ್ನಲೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.ಪ್ರವರ್ಗ ‘ಎ’ ಮತ್ತು ‘ಬಿ’ ದೇವಾಲಯಗಳಿಗೆ ಈ ನಿಯಮ ಅನ್ವಯಿಸುತ್ತದೆ.ಇತ್ತೀಚಿನ ದಿನಗಳಲ್ಲಿ ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.ಈ ಸಮಯದಲ್ಲಿ ಹಿರಿಯ ನಾಗರೀಕರು ದರುಶನ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದಾಗಿ ಧಾರ್ಮಿಕ ದತ್ತಿ ಇಲಾಖೆ ಇಂತಹ ನಿರ್ಧಾರ ಕೈಗೊಂಡಿದೆ.ಹಿರಿಯ ನಾಗರೀಕರು ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸಿದಲ್ಲಿ ತ್ವರಿತ ದರುಶನ ವ್ಯವಸ್ಥೆ ಮಾಡಲು ಸಹಾಯ ಕೇಂದ್ರ ತೆರೆಯುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ…