ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ…

ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ…

ಮೈಸೂರು,ಜೂ24,Tv10 ಕನ್ನಡ
ಮೈಸೂರಿನ ಗಾಂಧಿನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ ಎಮ್ ಗಾಯತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಕ್ಕಳೊಡನೆ ಬೆರೆತು ಮೂಲಭೂತ ಸೌಕರ್ಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಾಡಿಗೆ ಕಟ್ಟಡದಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಗಮನಿಸಿ ಯಾವುದಾದರೂ ದೊಡ್ಡ ಕಟ್ಟಡಕ್ಕೆ ಸ್ಥಳಾಂತರ ಮಾಡುವಂತೆ ಹಾಗೂ ನಗರದ ಹೊರವಲಯದ ಮಂಡಕಳ್ಳಿ ಬಳಿ ದೊರೆತಿರುವ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಅನುದಾನ ಬಿಡುಗಡೆಗೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ತಯಾರಿ ಮಾಡುವಂತೆ ಸ್ಥಳದಲ್ಲಿ ಹಾಜರಿದ್ದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡರವರಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಅಲೆಮಾರಿ ಜನಾಂಗಕ್ಕೆ ಸೇರಿದ ತಂದೆ ತಾಯಿಗಳ ಮಕ್ಕಳೇ ಅತಿ ಹೆಚ್ಚು ಇರುವ ವಸತಿ ಶಾಲೆಗೆ ಹೆಚ್ಚಿನ ಮೂಲಭೂತ ಸೌಕರ್ಯ ಬೇಕಾಗಿದೆ ಎಂಬುದನ್ನು ಮನಗಂಡು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಕ್ಕಳ ಕುಟುಂಬದ ಪೂರ್ವಪರ ವಿಚಾರಿಸಿ ಮಕ್ಕಳಿಗೆ ಬುದ್ಧಿ ಮಾತು ಹೇಳಿ ಅವರಿಗೆ ಸಿಹಿ ತಿಂಡಿ ನೀಡಿದರು.
ಇಲ್ಲಿನ ಮಕ್ಕಳ ತಂದೆತಾಯಿಗಳು, ಮಕ್ಕಳನ್ನು ಶಿಕ್ಷಣ ಪಡೆಯುವ ಉದ್ದೇಶದಿಂದ ಶಾಲೆಯಲ್ಲಿ ಬಿಟ್ಟು ಬೇರೆ ಬೇರೆ ನಗರಗಳು ಹಳ್ಳಿಗಳಿಗೆ ಕೂಲಿಕೆಲಸ, ವ್ಯಾಪಾರ ವ್ಯವಹಾರ ಮಾಡಲು ಹೊರಗಡೆ ಹೋಗಿರುತ್ತಾರೆ.ಆದ್ದರಿಂದ ಇಂತಹ ಮಕ್ಕಳ ಯೋಗ ಕ್ಷೇಮ ಸರಿಯಾಗಿ ನೋಡಿಕೊಳ್ಳಬೇಕು ಎಂದು ವಾರ್ಡನ್ ರವರಿಗೆ ಸೂಚಿಸಿದರು.
ಇಂತಹ ಶಾಲೆಗಳ ಅವಶ್ಯಕತೆ ಇರುವುದನ್ನು ಮನಗಂಡು ಮತ್ತೊಂದು ಶಾಲೆಯ ಪ್ರಾರಂಭ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು ಹಾಗೂ ಈ ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಹೆಚ್ಚುವರಿ ವಸ್ತುಗಳನ್ನು ಪಟ್ಟಿ ಮಾಡಿ ಕೊಡಲು ಸೂಚಿಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *