ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ…

ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಪಂ ಸಿಇಓ ಭೇಟಿ… ಮೂಲಭೂತ ಸೌಕರ್ಯಗಳ ಪರಿಶೀಲನೆ…

ಮೈಸೂರು,ಜೂ24,Tv10 ಕನ್ನಡ
ಮೈಸೂರಿನ ಗಾಂಧಿನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ ಎಮ್ ಗಾಯತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಕ್ಕಳೊಡನೆ ಬೆರೆತು ಮೂಲಭೂತ ಸೌಕರ್ಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಾಡಿಗೆ ಕಟ್ಟಡದಲ್ಲಿ ಸ್ಥಳಾವಕಾಶದ ಕೊರತೆ ಇರುವುದನ್ನು ಗಮನಿಸಿ ಯಾವುದಾದರೂ ದೊಡ್ಡ ಕಟ್ಟಡಕ್ಕೆ ಸ್ಥಳಾಂತರ ಮಾಡುವಂತೆ ಹಾಗೂ ನಗರದ ಹೊರವಲಯದ ಮಂಡಕಳ್ಳಿ ಬಳಿ ದೊರೆತಿರುವ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಅನುದಾನ ಬಿಡುಗಡೆಗೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ತಯಾರಿ ಮಾಡುವಂತೆ ಸ್ಥಳದಲ್ಲಿ ಹಾಜರಿದ್ದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡರವರಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಅಲೆಮಾರಿ ಜನಾಂಗಕ್ಕೆ ಸೇರಿದ ತಂದೆ ತಾಯಿಗಳ ಮಕ್ಕಳೇ ಅತಿ ಹೆಚ್ಚು ಇರುವ ವಸತಿ ಶಾಲೆಗೆ ಹೆಚ್ಚಿನ ಮೂಲಭೂತ ಸೌಕರ್ಯ ಬೇಕಾಗಿದೆ ಎಂಬುದನ್ನು ಮನಗಂಡು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಕ್ಕಳ ಕುಟುಂಬದ ಪೂರ್ವಪರ ವಿಚಾರಿಸಿ ಮಕ್ಕಳಿಗೆ ಬುದ್ಧಿ ಮಾತು ಹೇಳಿ ಅವರಿಗೆ ಸಿಹಿ ತಿಂಡಿ ನೀಡಿದರು.
ಇಲ್ಲಿನ ಮಕ್ಕಳ ತಂದೆತಾಯಿಗಳು, ಮಕ್ಕಳನ್ನು ಶಿಕ್ಷಣ ಪಡೆಯುವ ಉದ್ದೇಶದಿಂದ ಶಾಲೆಯಲ್ಲಿ ಬಿಟ್ಟು ಬೇರೆ ಬೇರೆ ನಗರಗಳು ಹಳ್ಳಿಗಳಿಗೆ ಕೂಲಿಕೆಲಸ, ವ್ಯಾಪಾರ ವ್ಯವಹಾರ ಮಾಡಲು ಹೊರಗಡೆ ಹೋಗಿರುತ್ತಾರೆ.ಆದ್ದರಿಂದ ಇಂತಹ ಮಕ್ಕಳ ಯೋಗ ಕ್ಷೇಮ ಸರಿಯಾಗಿ ನೋಡಿಕೊಳ್ಳಬೇಕು ಎಂದು ವಾರ್ಡನ್ ರವರಿಗೆ ಸೂಚಿಸಿದರು.
ಇಂತಹ ಶಾಲೆಗಳ ಅವಶ್ಯಕತೆ ಇರುವುದನ್ನು ಮನಗಂಡು ಮತ್ತೊಂದು ಶಾಲೆಯ ಪ್ರಾರಂಭ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು ಹಾಗೂ ಈ ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಹೆಚ್ಚುವರಿ ವಸ್ತುಗಳನ್ನು ಪಟ್ಟಿ ಮಾಡಿ ಕೊಡಲು ಸೂಚಿಸಿದರು…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *