ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತೋವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ಅಪಘಾತದ ವಿಡಿಯೋವನ್ನು ತಪ್ಪಾಗಿ ತೋರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ

  • Crime
  • June 25, 2023
  • No Comment
  • 167

ದಿನಾಂಕ 18/06/2023 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ‌ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕ್ಕೆ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ‌ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುತ್ತದೆ. ಶ್ರೀಮತಿ ಶಾಂತ ಕುಮಾರಿ, W/O ಲೇ!! ಬಸವರಾಜು, 33 ವರ್ಷ, ಮಾಗುಡಿಲು, ಹೆಚ್.ಡಿ.ಕೋಟೆ ತಾಲೂಕು ಇವರಿಗೆ ಬಲಗೈ ತುಂಡಾಗಿದೆ ಹಾಗೂ ಶ್ರೀಮತಿ ರಾಜಮ್ಮ, W/O ನಾಗರಾಜ ನಾಯಕ, 50 ವರ್ಷ, ಹುಲ್ಲಹಳ್ಳಿ, ನಂಜನಗೂಡು ತಾಲೂಕು ಇವರಿಗೆ ಬಲಗೈ ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಳುಗಳನ್ಬು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ.
ಲಾರಿ ಚಾಲಕನ ವಿರುಧ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‌ಐ.ಆರ್ ದಾಖಲಾಗಿರುತ್ತದೆ.

ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ.

ಆದ್ದರಿಂದ ಸಾಮಾಜಿಕ‌ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು‌ ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂದು ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *