ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತೋವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ಅಪಘಾತದ ವಿಡಿಯೋವನ್ನು ತಪ್ಪಾಗಿ ತೋರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ

  • Crime
  • June 25, 2023
  • No Comment
  • 155

ದಿನಾಂಕ 18/06/2023 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ‌ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕ್ಕೆ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ‌ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುತ್ತದೆ. ಶ್ರೀಮತಿ ಶಾಂತ ಕುಮಾರಿ, W/O ಲೇ!! ಬಸವರಾಜು, 33 ವರ್ಷ, ಮಾಗುಡಿಲು, ಹೆಚ್.ಡಿ.ಕೋಟೆ ತಾಲೂಕು ಇವರಿಗೆ ಬಲಗೈ ತುಂಡಾಗಿದೆ ಹಾಗೂ ಶ್ರೀಮತಿ ರಾಜಮ್ಮ, W/O ನಾಗರಾಜ ನಾಯಕ, 50 ವರ್ಷ, ಹುಲ್ಲಹಳ್ಳಿ, ನಂಜನಗೂಡು ತಾಲೂಕು ಇವರಿಗೆ ಬಲಗೈ ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಳುಗಳನ್ಬು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ.
ಲಾರಿ ಚಾಲಕನ ವಿರುಧ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‌ಐ.ಆರ್ ದಾಖಲಾಗಿರುತ್ತದೆ.

ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ.

ಆದ್ದರಿಂದ ಸಾಮಾಜಿಕ‌ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು‌ ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂದು ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *