ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತೋವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ಅಪಘಾತದ ವಿಡಿಯೋವನ್ನು ತಪ್ಪಾಗಿ ತೋರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ

  • Crime
  • June 25, 2023
  • No Comment
  • 160

ದಿನಾಂಕ 18/06/2023 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ‌ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕ್ಕೆ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ‌ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುತ್ತದೆ. ಶ್ರೀಮತಿ ಶಾಂತ ಕುಮಾರಿ, W/O ಲೇ!! ಬಸವರಾಜು, 33 ವರ್ಷ, ಮಾಗುಡಿಲು, ಹೆಚ್.ಡಿ.ಕೋಟೆ ತಾಲೂಕು ಇವರಿಗೆ ಬಲಗೈ ತುಂಡಾಗಿದೆ ಹಾಗೂ ಶ್ರೀಮತಿ ರಾಜಮ್ಮ, W/O ನಾಗರಾಜ ನಾಯಕ, 50 ವರ್ಷ, ಹುಲ್ಲಹಳ್ಳಿ, ನಂಜನಗೂಡು ತಾಲೂಕು ಇವರಿಗೆ ಬಲಗೈ ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಳುಗಳನ್ಬು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ.
ಲಾರಿ ಚಾಲಕನ ವಿರುಧ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‌ಐ.ಆರ್ ದಾಖಲಾಗಿರುತ್ತದೆ.

ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ.

ಆದ್ದರಿಂದ ಸಾಮಾಜಿಕ‌ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು‌ ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂದು ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *