ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಮೈಸೂರು, ಜು 4,Tv10 ಕನ್ನಡ
ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ತಾಲ್ಲೂಕಿನ ಎಲ್ಲಾ ಹೋಬಳಿಯ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.ಈ ಸಂದರ್ಭದಲ್ಲಿ ಆರ್ ಟಿ ಸಿ ಕಾಲಂ 3 ಮತ್ತು 9 ರಲ್ಲಿರುವ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಗತಿಯು ಕುಂಠಿತವಾಗಿರುವುದನ್ನು ಗಮನಿಸಿ ಪ್ರಥಮಾಧ್ಯತೆ ಮೇರೆ ಇದನ್ನು ಸರಿಪಡಿಸಲು ಸೂಚನೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸವಂತೆ ಹಾಗೂ ಗ್ರಾಮಗಳಲ್ಲಿ ಜನಸಂಖ್ಯೆಯ ಅನುಗುಣವಾಗಿ ಸ್ಮಶಾನ ಜಮೀನುಗಳು ಲಭ್ಯವಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಜಮೀನು ಅವಶ್ಯವಿದ್ದಲ್ಲಿ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವ ದಿಸೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಪಕ್ಷದಲ್ಲಿ ಖಾಸಗಿ ಜಮೀನನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು


ಅಟಲ್ ಜೀ ಜನ ಸ್ನೇಹಿ ಕೇಂದ್ರದಲ್ಲಿ ಸ್ವೀಕರಿಸುತ್ತಿರುವ ಅರ್ಜಿಗಳನ್ನು 7 ದಿವಸದೊಳಗೆ ಕಾನೂನು ಪ್ರಕಾರವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.ಭೂಮಿ ತಂತ್ರಾಂಶದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಗಮನಿಸಿ, ನಿರ್ಧಿಷ್ಠ ಸಮಯದೊಳಗೆ ಇತ್ಯರ್ಥಪಡಿಸಲು ಹಾಗೂ ಕಚೇರಿಗೆ ಹಾಜರಾಗುವ ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ಯಾವುದೇ ವಿಳಂಬ ಮಾಡದೇ ಮಾಡಿಕೊಡಲು ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಿರೀಶ್ ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಧಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *