ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

*ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದು
ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006 ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೋಟೆಲ್ ಗಳು, ಬೇಕರಿಗಳು ಆಹಾರ ಮಾರಾಟ ಕೇಂದ್ರಗಳಲ್ಲಿ ಕಲಬೆರಕೆ ಮಾಡಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಪ್ರಕರಣಗಳು ಕಂಡು ಬರುತ್ತವೆ. ಇವುಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಂಕಿತ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಜನರ ಆರೋಗ್ಯ ಕಾಪಾಡಬೇಕು. ಕೆಟ್ಟ ಕೊಲೆಸ್ಟ್ರಾಲ್ ಇರುವ ಎಣ್ಣೆಯನ್ನು ಬಳಸುತ್ತಾರೆ. ಇದರಿಂದ ಜನರ ಆರೋಗ್ಯ ಹಾಳಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಗಳು ಕಂಡುಬರುತ್ತವೆ. ಆಹಾರ ಉತ್ಪಾದನೆಯಲ್ಲಿ ಸ್ವಚ್ಛತೆಯನ್ನು ಕಪಾಡುವುದಿಲ್ಲ. ಆರೋಗ್ಯಕ್ಕೆ ತೊಂದರೆ ಉಂಟುಮಾಡುವ ಬಣ್ಣಗಳನ್ನು ಬೇಕರಿ ಉತ್ಪನ್ನಗಳು, ಸಿಹಿ ತಿಂಡಿಗಳು, ರಸ್ತೆ ಬದಿ ಮಾರುವ ಜಂಕ್ ಫುಡ್ ಗಳ ತಯಾರಿಕೆಯಲ್ಲಿ ಬಳಸುತ್ತಾರೆ ಇದನ್ನು ಪರಿಶೀಲಿಸಿ ಇಂಥವರ ಮೇಲೆ ಪ್ರಕರಣಗಳನ್ನು ದಾಖಲಿಸಿ ತಡೆಗಟ್ಟಬೇಕು ಎಂದು ತಿಳಿಸಿದರು.

ಆಹಾರ ಉತ್ಪನ್ನಗಳನ್ನು ತಯಾರಿಸುವ ಸಿಬ್ಬಂದಿಗಳು ಸ್ವಚ್ಚತೆಯನ್ನು ಕಾಪಾಡಬೇಕು. ಮಾಂಸ ಹಾಗೂ ಚಿಕನ್ ಅಂಗಡಿ ಯವರು ಸ್ವಚ್ಛತೆಯನ್ನು ಕಾಪಾಡಿಕೊಂಡು, ತ್ಯಾಜ್ಯಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು.ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚು ಕಾಲ ಕೆಡದಂತೆ ಕಾಪಾಡಲು ವ್ಯಾಕ್ಸ್ ಬಳಸುತ್ತಾರೆ ಇದರ ಬಳಕೆಯಿಂದ ಆರೋಗ್ಯ ಹಾಳಾಗುತ್ತದೆ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ. ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *