ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

*ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದು
ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ – 2006 ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೋಟೆಲ್ ಗಳು, ಬೇಕರಿಗಳು ಆಹಾರ ಮಾರಾಟ ಕೇಂದ್ರಗಳಲ್ಲಿ ಕಲಬೆರಕೆ ಮಾಡಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಪ್ರಕರಣಗಳು ಕಂಡು ಬರುತ್ತವೆ. ಇವುಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಂಕಿತ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಜನರ ಆರೋಗ್ಯ ಕಾಪಾಡಬೇಕು. ಕೆಟ್ಟ ಕೊಲೆಸ್ಟ್ರಾಲ್ ಇರುವ ಎಣ್ಣೆಯನ್ನು ಬಳಸುತ್ತಾರೆ. ಇದರಿಂದ ಜನರ ಆರೋಗ್ಯ ಹಾಳಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಗಳು ಕಂಡುಬರುತ್ತವೆ. ಆಹಾರ ಉತ್ಪಾದನೆಯಲ್ಲಿ ಸ್ವಚ್ಛತೆಯನ್ನು ಕಪಾಡುವುದಿಲ್ಲ. ಆರೋಗ್ಯಕ್ಕೆ ತೊಂದರೆ ಉಂಟುಮಾಡುವ ಬಣ್ಣಗಳನ್ನು ಬೇಕರಿ ಉತ್ಪನ್ನಗಳು, ಸಿಹಿ ತಿಂಡಿಗಳು, ರಸ್ತೆ ಬದಿ ಮಾರುವ ಜಂಕ್ ಫುಡ್ ಗಳ ತಯಾರಿಕೆಯಲ್ಲಿ ಬಳಸುತ್ತಾರೆ ಇದನ್ನು ಪರಿಶೀಲಿಸಿ ಇಂಥವರ ಮೇಲೆ ಪ್ರಕರಣಗಳನ್ನು ದಾಖಲಿಸಿ ತಡೆಗಟ್ಟಬೇಕು ಎಂದು ತಿಳಿಸಿದರು.

ಆಹಾರ ಉತ್ಪನ್ನಗಳನ್ನು ತಯಾರಿಸುವ ಸಿಬ್ಬಂದಿಗಳು ಸ್ವಚ್ಚತೆಯನ್ನು ಕಾಪಾಡಬೇಕು. ಮಾಂಸ ಹಾಗೂ ಚಿಕನ್ ಅಂಗಡಿ ಯವರು ಸ್ವಚ್ಛತೆಯನ್ನು ಕಾಪಾಡಿಕೊಂಡು, ತ್ಯಾಜ್ಯಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು.ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚು ಕಾಲ ಕೆಡದಂತೆ ಕಾಪಾಡಲು ವ್ಯಾಕ್ಸ್ ಬಳಸುತ್ತಾರೆ ಇದರ ಬಳಕೆಯಿಂದ ಆರೋಗ್ಯ ಹಾಳಾಗುತ್ತದೆ ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ. ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪ್ಥಿತರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *