20 ಕೆಜಿ ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಗೆ 10 ವರ್ಷ ಶಿಕ್ಷೆ…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಜು7,Tv10 ಕನ್ನಡ
ಆಂಧ್ರ ಪ್ರದೇಶ ದಿಂದ ಅಕ್ರಮವಾಗಿ 20 ಕೆಜಿ ಗಾಂಜಾ ತಂದು ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಶಾಂತಿನಗರ ದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ. ಬೆನೋತ್ ವೆಂಕಣ್ಣ ಎಂಬಾತ ಶಿಕ್ಷೆಗೆ ಒಳಗಾದ ಅಪರಾಧಿ. ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ.
ದಿನಾಂಕ 7-1-2021 ರಂದು ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎನ್ ಎಂ ಪೂಣಚ್ಚ ರವರು ಗಸ್ತಿನಲ್ಲಿದ್ದಾಗ ಬೆನೋತ್ ವೆಂಕಣ್ಣ ಎಂಬ ಆಂಧ್ರ ಮೂಲದ ವ್ಯಕ್ತಿ ಒಂದು ಕಪ್ಪು ಸೂಟ್ ಕೇಸ್ ನಲ್ಲಿ ಸುಮಾರು 20 ಕೆಜಿ ಗಾಂಜಾ ಮಾದಕ ವಸ್ತುವನ್ನು ತುಂಬಿಕೊಂಡು ಮೈಸೂರಿನ ವ್ಯಕ್ತಿಗೆ ಹಣಕ್ಕಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿಚಾರ ಬಾತ್ಮಿದಾರರಿಂದ ತಿಳಿದು ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಆತನ ಬಳಿ ಸುಮಾರು 20 ಕೆಜಿ ಮಾದಕ ವಸ್ತು ಗಾಂಜಾ ಇರುವುದು ದೃಢಪಟ್ಟಿದೆ. ಆರೋಪಿಯನ್ನು ದಸ್ತಗಿರಿ ಮಾಡಿ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದರು . ನಂತರ ಪ್ರಕರಣದ ತನಿಖೆಯನ್ನು ಕೈಗೊಂಡ ಠಾಣೆಯ ಪಿ ಎಸ್ ಐ ಜೈಕೀರ್ತಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಎನ್ ಎಂ ಪೂಣಚ್ಚ ರವರುಗಳು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷರೋಪಣ ಪತ್ರ ವನ್ನು ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಸಿಪಿಸಿ ಆರ್ ಎಸ್ ಕೃಷ್ಣ ಕಾರ್ಯ ನಿರ್ವಹಿಸಿದ್ದರು.

ನ್ಯಾಯಾಲಯ ದ SPL C NO 155/21ರಲ್ಲಿ ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ಕೇಸುಗಳ ವಿಶೇಷ ನ್ಯಾಯಾಲಯ ವಾಗಿರುವ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ ಎಸ್ ಸಂಗ್ರೇಶಿ ರವರು ಈ ದಿನ ದಿನಾಂಕ ಇಂದು ರಂದು ತೀರ್ಪು ಪ್ರಕಟಿಸಿದ್ದು ಆರೋಪಿ ಬೆನೋತ್ ವೆಂಕಣ್ಣ ನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ಅದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀ ಚಿನ್ನಪ್ಪ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *