20 ಕೆಜಿ ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಗೆ 10 ವರ್ಷ ಶಿಕ್ಷೆ…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಜು7,Tv10 ಕನ್ನಡ
ಆಂಧ್ರ ಪ್ರದೇಶ ದಿಂದ ಅಕ್ರಮವಾಗಿ 20 ಕೆಜಿ ಗಾಂಜಾ ತಂದು ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಶಾಂತಿನಗರ ದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ. ಬೆನೋತ್ ವೆಂಕಣ್ಣ ಎಂಬಾತ ಶಿಕ್ಷೆಗೆ ಒಳಗಾದ ಅಪರಾಧಿ. ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ.
ದಿನಾಂಕ 7-1-2021 ರಂದು ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎನ್ ಎಂ ಪೂಣಚ್ಚ ರವರು ಗಸ್ತಿನಲ್ಲಿದ್ದಾಗ ಬೆನೋತ್ ವೆಂಕಣ್ಣ ಎಂಬ ಆಂಧ್ರ ಮೂಲದ ವ್ಯಕ್ತಿ ಒಂದು ಕಪ್ಪು ಸೂಟ್ ಕೇಸ್ ನಲ್ಲಿ ಸುಮಾರು 20 ಕೆಜಿ ಗಾಂಜಾ ಮಾದಕ ವಸ್ತುವನ್ನು ತುಂಬಿಕೊಂಡು ಮೈಸೂರಿನ ವ್ಯಕ್ತಿಗೆ ಹಣಕ್ಕಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿಚಾರ ಬಾತ್ಮಿದಾರರಿಂದ ತಿಳಿದು ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಆತನ ಬಳಿ ಸುಮಾರು 20 ಕೆಜಿ ಮಾದಕ ವಸ್ತು ಗಾಂಜಾ ಇರುವುದು ದೃಢಪಟ್ಟಿದೆ. ಆರೋಪಿಯನ್ನು ದಸ್ತಗಿರಿ ಮಾಡಿ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದರು . ನಂತರ ಪ್ರಕರಣದ ತನಿಖೆಯನ್ನು ಕೈಗೊಂಡ ಠಾಣೆಯ ಪಿ ಎಸ್ ಐ ಜೈಕೀರ್ತಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಎನ್ ಎಂ ಪೂಣಚ್ಚ ರವರುಗಳು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷರೋಪಣ ಪತ್ರ ವನ್ನು ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಸಿಪಿಸಿ ಆರ್ ಎಸ್ ಕೃಷ್ಣ ಕಾರ್ಯ ನಿರ್ವಹಿಸಿದ್ದರು.

ನ್ಯಾಯಾಲಯ ದ SPL C NO 155/21ರಲ್ಲಿ ವಿಚಾರಣೆ ನಡೆಸಿದ ಎನ್ ಡಿ ಪಿ ಎಸ್ ಕೇಸುಗಳ ವಿಶೇಷ ನ್ಯಾಯಾಲಯ ವಾಗಿರುವ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ ಎಸ್ ಸಂಗ್ರೇಶಿ ರವರು ಈ ದಿನ ದಿನಾಂಕ ಇಂದು ರಂದು ತೀರ್ಪು ಪ್ರಕಟಿಸಿದ್ದು ಆರೋಪಿ ಬೆನೋತ್ ವೆಂಕಣ್ಣ ನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ಅದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀ ಚಿನ್ನಪ್ಪ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *