*ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…*

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…

ಟಿ.ನರಸೀಪುರ,ಜು10,Tv10 ಕನ್ನಡ
ಟಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 6 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆv ಆರ್ ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದೆ.
ಹನುಮ ಜಯಂತಿ ಮೆರವಣಿಗೆಯಲ್ಲಿ ಪುನೀತ್ ರಾಜ್ ಕುಮಾರ್ ಪೋಟೊ ತೆಗೆಸಿದ್ದೆ ಕಾರಣವಾಯಿತಾ ಕೊಲೆಗೆ ಎನ್ನಲಾಗಿದೆ.
ಮೊನ್ನೆ ಟಿ.ನರಸೀಪುರದಲ್ಲಿ ನಡೆದಿದ್ದ ಹನುಮ ಜಯಂತಿ ವೇಳೆ ವ್ಯಾನ್ ನಲ್ಲಿ ಭಾರತ ಮಾತೇ ಪೋಟೊ ಮುಂದೆ‌ ಪುನೀತ್ ರಾಜ್ ಕುಮಾರ್ ಪೋಟೋ ಹಾಕಿದ್ದರು.ಈ ವೇಳೆ ಇದಕ್ಕೆ ಕೆಲವರ ವಿರೋಧ ವ್ಯಕ್ತವಾಗಿತ್ತು.ಈ ವಿಚಾರವಾಗಿ ಇಲ್ಲಿ ಯಾವ ವ್ಯಕ್ತಿಯ ಪೋಟೋ ಹಾಕೋದು ಬೇಡ ಎಂದು ತೆಗೆಸಿದ್ದ ಕೊಲೆಯಾದ ವೇಣುಗೋಪಾಲ್‌.
ಆ ವೇಳೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ.ನಂತರ ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ಅವರ ಗುಂಪಿನಲ್ಲೆ ಗಲಾಟೆಯಾಗಿತ್ತು.
ನಂತರ ನಿನ್ನೆ ಮಧ್ಯಾಹ್ನ ಕೂಡ ಜಗಳವಾಗಿತ್ತು.
ಬಳಿಕ ರಾತ್ರಿ ರಾಜಿ ಪಂಚಾಯಿತಿ ನೆಪದಲ್ಲಿ ಕರೆಸಿಕೊಂಡು ಕೊಲೆ‌ ಮಾಡಲಾಗಿದೆ ಎಂದು
ಕೊಲೆಯಾದ ವೇಣುಗೋಪಾಲ್ ಪತ್ನಿ ಪೂರ್ಣಿಮ ಹೇಳಿಕೆ ನೀಡಿದ್ದಾರೆ.

ವೇಣುಗೋಪಾಲ್ ಕೊಲೆಗೆ ಟಿ.ನರಸೀಪುರದಲ್ಲಿ
ಸ್ವಯಂ ಪ್ರೇರಿತ ಬಂದ್‌ಗೆ ಮಾಡಲಾಗುತ್ತಿದೆ.
ಹಿಂದೂ ಪರ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಿದ ಹಿನ್ನಲೆ
ಸ್ವಯಂ ಪ್ರೇರಿತವಾಗಿ ಅಂಗಡಿ ಮಾಲೀಕರು ಬಂದ್ ಮಾಡಿದ್ದಾರೆ.
ಟಿ.ನರಸೀಪುರ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಅಹಿತಕರ ಘಟನೆ ಜರುಗದಂತೆ ಪೋಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.
ಮೃತ ವ್ಯಕ್ತಿ ವೇಣುಗೋಪಾಲ್ ಮನೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *