ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…

ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…

ಮೈಸೂರು,ಜು11,Tv10 ಕನ್ನಡ
ಬೆಳಗಾಂನಲ್ಲಿ ಕಿಡಿಗೇಡಿಗಳಿಂದ ಕ್ರೂರ ಹತ್ಯೆಗೊಳಗಾದ ಜೈನಮುನಿ ಕಾಮಕುಮಾರ ನಂದಿ‌ ಸ್ವಾಮೀಜಿ ಮಹಾರಾಜ ಶ್ರೀಗಳಿಗೆ ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಭ್ರಾಹ್ಮಣ ವಿಧ್ಯಾರ್ಥಿ ನಿಲಯದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಂತಾಪ ಸಭೆ ಹಮ್ಮಿಕೊಳ್ಳಲಾಗಿತ್ತು. ಭಾವಪೂರ್ಣ ನಮನ ಸಲ್ಲಿಸಿ ಶೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇಳೈ ಆಳ್ವಾರ್ ಸ್ವಾಮೀಜಿ ರವರು ಮುನಿಗಳ ಹತ್ಯೆ ಮಾಡಿದವರಿಗೆ ಸರ್ಕಾರ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಸಾಧು ಸಂತರಿಗೆ ಸರ್ಕಾರ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ನಗರಪಾಲಿಕೆ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಮಾತನಾಡಿ
ಜೈನ ಸಮಾಜ ಶಾಂತಿ ಪ್ರಿಯ ಸಮಾಜ. ಅಹಿಂಸಾ ಮಾರ್ಗ ಸಮಾಜದ ಮೂಲಮಂತ್ರ. ಆದರೆ ಮುನಿಗಳನ್ನು ಕರೆಂಟ್ ಶಾಕ್ ನೀಡಿ, ಕೊಲೆ ಮಾಡಿ, ಮೃತ ದೇಹವನ್ನು ಬೋರವೆಲ್‍ನಲ್ಲಿ ತುಂಡರಿಸಿ ತುಂಬಿದ್ದಾರೆ. ಇದು ಅತ್ಯಂತ ಅಮಾನೀಯ ಘಟನೆ. ಸದಾ ಸಮಾಜದ ಒಳಿತಿಗೆ ಶ್ರಮಿಸುವ ಜೈನ ಸಮಾಜದ ಮುನಿಗಳ ಹತ್ಯೆ ಆಗಿರುವುದು ಖಂಡನೀಯ. ರಾಜ್ಯ ಸರ್ಕಾರ ಮಠಾಧೀಶರಿಗೆ ಮುನಿಗಳಿಗೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಸಂತಾಪ ಸಭೆಯಲ್ಲಿ ಅಪೂರ್ವ ಸುರೇಶ್ , ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರಾದ ಮೈ ಲಾ ವಿಜಯ್ ಕುಮಾರ್,
ಜೈನ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಕಾರ್ಯದರ್ಶಿ ಶಮಾನಂದ್ ಸಾಗರ್ , ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ,
ಉದ್ಯಮಿ ಜಯರಾಮ್, ಧರ್ಮರಾಜ್, ನಾಗೇಶ್, ಸಂದೀಪ್ ಚಂದ್ರಶೇಖರ್, ಎಸ್ ಎನ್ ರಾಜೇಶ್, ಚಿನ್ನ ಬೆಳ್ಳಿ ವ್ಯಾಪಾರ ನೌಕರರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಸುಚೇಂದ್ರ,ಧರ್ಮೇಂದ್ರ, ಬಸವರಾಜು, ರಾಮಚಂದ್ರ ಹಾಗೂ ಇನ್ನಿತರರು ಭಾಗವಹಿಸಿದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *