ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…

ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…

ಮೈಸೂರು,ಜು11,Tv10 ಕನ್ನಡ
ಬೆಳಗಾಂನಲ್ಲಿ ಕಿಡಿಗೇಡಿಗಳಿಂದ ಕ್ರೂರ ಹತ್ಯೆಗೊಳಗಾದ ಜೈನಮುನಿ ಕಾಮಕುಮಾರ ನಂದಿ‌ ಸ್ವಾಮೀಜಿ ಮಹಾರಾಜ ಶ್ರೀಗಳಿಗೆ ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಭ್ರಾಹ್ಮಣ ವಿಧ್ಯಾರ್ಥಿ ನಿಲಯದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಂತಾಪ ಸಭೆ ಹಮ್ಮಿಕೊಳ್ಳಲಾಗಿತ್ತು. ಭಾವಪೂರ್ಣ ನಮನ ಸಲ್ಲಿಸಿ ಶೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇಳೈ ಆಳ್ವಾರ್ ಸ್ವಾಮೀಜಿ ರವರು ಮುನಿಗಳ ಹತ್ಯೆ ಮಾಡಿದವರಿಗೆ ಸರ್ಕಾರ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಸಾಧು ಸಂತರಿಗೆ ಸರ್ಕಾರ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ನಗರಪಾಲಿಕೆ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಮಾತನಾಡಿ
ಜೈನ ಸಮಾಜ ಶಾಂತಿ ಪ್ರಿಯ ಸಮಾಜ. ಅಹಿಂಸಾ ಮಾರ್ಗ ಸಮಾಜದ ಮೂಲಮಂತ್ರ. ಆದರೆ ಮುನಿಗಳನ್ನು ಕರೆಂಟ್ ಶಾಕ್ ನೀಡಿ, ಕೊಲೆ ಮಾಡಿ, ಮೃತ ದೇಹವನ್ನು ಬೋರವೆಲ್‍ನಲ್ಲಿ ತುಂಡರಿಸಿ ತುಂಬಿದ್ದಾರೆ. ಇದು ಅತ್ಯಂತ ಅಮಾನೀಯ ಘಟನೆ. ಸದಾ ಸಮಾಜದ ಒಳಿತಿಗೆ ಶ್ರಮಿಸುವ ಜೈನ ಸಮಾಜದ ಮುನಿಗಳ ಹತ್ಯೆ ಆಗಿರುವುದು ಖಂಡನೀಯ. ರಾಜ್ಯ ಸರ್ಕಾರ ಮಠಾಧೀಶರಿಗೆ ಮುನಿಗಳಿಗೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಸಂತಾಪ ಸಭೆಯಲ್ಲಿ ಅಪೂರ್ವ ಸುರೇಶ್ , ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರಾದ ಮೈ ಲಾ ವಿಜಯ್ ಕುಮಾರ್,
ಜೈನ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಕಾರ್ಯದರ್ಶಿ ಶಮಾನಂದ್ ಸಾಗರ್ , ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ,
ಉದ್ಯಮಿ ಜಯರಾಮ್, ಧರ್ಮರಾಜ್, ನಾಗೇಶ್, ಸಂದೀಪ್ ಚಂದ್ರಶೇಖರ್, ಎಸ್ ಎನ್ ರಾಜೇಶ್, ಚಿನ್ನ ಬೆಳ್ಳಿ ವ್ಯಾಪಾರ ನೌಕರರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಸುಚೇಂದ್ರ,ಧರ್ಮೇಂದ್ರ, ಬಸವರಾಜು, ರಾಮಚಂದ್ರ ಹಾಗೂ ಇನ್ನಿತರರು ಭಾಗವಹಿಸಿದರು..

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *