ಪೇಪರ್ ಬಟ್ಟೆ ಚೀಲಗಳನ್ನು ಬಳುಸುವುದರಿಂದ ಪರಿಸರ ರಕ್ಷಣೆ ಮಾಡಲು ಸಾದ್ಯ -ಲಯನ್ ಎನ್ . ಜಯಪ್ರಕಾಶ್ ಕರೆ**

ಪೇಪರ್ ಬಟ್ಟೆ ಚೀಲಗಳನ್ನು ಬಳುಸುವುದರಿಂದ ಪರಿಸರ ರಕ್ಷಣೆ ಮಾಡಲು ಸಾದ್ಯ -ಲಯನ್ ಎನ್ . ಜಯಪ್ರಕಾಶ್ ಕರೆ**
ಭೂಮಿಯ ಪರಿಸರದಲ್ಲಿ ಪ್ಲಾಸ್ಟಿಕ್ ವಸ್ತುಗಳು ಮತ್ತು ಕಣಗಳು ಅಂದರೆ ಪ್ಲಾಸ್ಟಿಕ್ ಬಾಟಲಿಗಚಳು ಚೀಲಗಳು ಶೇಖರಣೆಯಾಗಿ ಅದು ಮಾನವರು , ವನ್ಯ ಜೀವಿಗಳು ಮತ್ತು ಅವುಗಳ ಅವಾಸಸ್ಥಾನದ ಮೇಲೆ ಪ್ರತಿಕೂಲ ಪರಿಣಾಮ ಬೀರಿ ಇಡೀ ಪರಿಸರವನ್ನು ಪ್ಲಾಸ್ಟಿಕ್ ನಾಶ ಮಾಡುವ ಸಾಧ್ಯತೆ ಇದೆ ಎಂದು ಲಯನ್ಸ್ ಅಂತರಾಷ್ಟ್ರೀಯ 317 ಜಿ ನ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆಯ ಜಿಲ್ಲಾಧ್ಯಕ್ಷರಾದ ಲಯನ್ ಎನ್ ಜಯಪ್ರಕಾಶ್ ರವರು ಇಂದು ಪೇಪರ್ ಬ್ಯಾಗ ದಿನದ ಪ್ರಯುಕ್ತ ಗ್ರಾಹಕರಿಗೆ ಪೇಪರ್ ಮತ್ತು ಬಟ್ಟೆ ಚೀಲಗಳನ್ನು ನೀಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಜಾಗೃತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಲಯನ್ಸ್ ಕ್ಲಬ್ ಆಫ್ ಅಂಬಾಸಿಡರ್ ಸಂಸ್ಥೆಯ ಅಧ್ಯಕ್ಷರಾದ ಲಯನ್ ಎಚ್ ಸಿ ಕಾಂತರಾಜುರವರು ಮಾತನಾಡಿ ಕೊಳೆತ ಪ್ಲಾಸ್ಟಿಕ್ ತ್ಯಾಜ್ಯವು ನೇರ ಬಳಕೆ ಪರೋಕ್ಷ ಬಳಕೆಯಿಂದ ಭೂಮಿ, ಜಲ,ಸಾಗರಗಳು ಭಾದಿಸುವ ಕಾರಣದಿಂದ ಆದಷ್ಟು ಮಟ್ಟಿಗೆ ಬಟ್ಟೆ ಪೇಪರ್ ಚೀಲಗಳನ್ನು ಬಳಸಿದರೆ ಮುಂದಿನ ಜನಾಂಗಕ್ಕೆ ಆರೋಗ್ಯಕರವಾದ ಪರಿಸರವನ್ನು ಸಂರಕ್ಷಿಸಬಹುದೆಂದು ಹೇಳಿದರು.
ಲಯನ್ಸ್ 317ಜಿ ಜಿಲ್ಲೆಯ ಸಂಪುಟ ಕಾರ್ಯದರ್ಶಿಯಾದ ಲಯನ್ ಟಿ.ಹೆಚ್ ವೆಂಕಟೇಶ್ ಹೊಸ ಲಯನ್ಸ್ ಜಿಲ್ಲೆಯ ವತಿಯಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಈ ವರ್ಷ ಹೆಚ್ಚು ಹೆಚ್ಚು ಆಯೋಜನೆ ಮಾಡಿ ಸಾರ್ವಜನಿಕರಲ್ಲಿ ಮನಃ ಪರಿವರ್ತನೆ ಆಗುವ ರೀತಿಯಲ್ಲಿ ಜಾಗೃತಿ ಉಂಟು ಮಾಡಲು ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿ ಆರ್ ದಿನೇಶ್ ಖಜಾಂಚಿ ವಿಷ್ಣು ಸದಸ್ಯರಾದ ಮಕಾಳ ಶಿವಕುಮಾರ್, ಭಾಸ್ಕರನಂದ ,ಅಮರ ಭವಾನಿ, ರವಿಚಂದ್ರ, ಅರುಣ್, ಅಮ್ಮಾಡಿ ಮಹದೇವ್ ,ಡಾಕ್ಟರ್ ಕಿಶೋರ್ ಹಾಜರಿದ್ದರು .

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *