ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ…

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ…

ಮೈಸೂರು,ಜು12,Tv10 ಕನ್ನಡ
ಟಿ.ನರಸೀಪುರದಲ್ಲಿ ಹನುಮಜಯಂತಿ ಆಚರಣೆ ವೇಳೆ ಹತ್ಯೆಯಾದ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ.ಸರ್ಕಾರಾಧಿಕಾರಕ್ಕೆ ಬರುತ್ತಿದ್ದಂತೆಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಹೇಳಿಕೆಗಳು ಸಹಜವಾಗಿ ಕೇಳಿ ಬರುತ್ತಿದೆ.ಸರ್ಕಾರದ ವಿರುದ್ದ ಎಂದಿನಂತೆ ವಿರೋಧ ಪಕ್ಷಗಳು ವಾಗ್ಧಾಳಿ ಶುರುಮಾಡಿವೆ. ಈಗಾಗಲೇ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ವೇಳೆ ಬೈಕ್ ಪಾರ್ಕಿಂಗ್ ಹಾಗೂ ಹನುಮಜಯಂತಿ ಆಚರಣೆ ವೇಳೆ ಪುನೀತ್ ರಾಜ್ ಕುಮಾರ್ ಫೋಟೋ ಬಳಸಿದ ಹಿನ್ನಲೆ ಕೊಲೆ ನಡೆದಿದೆ ಎಂಬ ವಿಚಾರ ವನ್ನ ಬಹಿರಂಗಪಡಿಸಿದ್ದಾರೆ.ಈ ಸಂಭಂಧ ನಾಲ್ವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಘಟನೆ ಅತ್ಯಂತ ಸೂಕ್ಷ್ಮವಾಗಿರುವ ಹಿನ್ನಲೆ ಪೊಲೀಸರು ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ.ಹೀಗಿದ್ದರೂ ವಾಗ್ಧಾಳಿಗಳಿಗೆ ಅಂಕುಶವಿಲ್ಲದಂತೆ ಸಾಗಿದೆ.ಇಂತಹ ಘಟನೆಗಳು ನಡೆದಾಗ ಯಾವುದೇ ವಿರೋಧ ಪಕ್ಷಗಳು ಲಾಭ ಮಾಡಿಕೊಳ್ಳಲು ಯತ್ನಿಸುವುದು ಸಹಜ.ಆದ್ರೆ ಇಂತಹ ವಿಚಾರದಲ್ಲಿ ರಾಜಕೀಯ ನಾಯಕರು ನೀಡುವ ಹೇಳಿಕೆಗಳು ಪರಿಸ್ಥಿತಿಯನ್ನ ಉಲ್ಭಣಗೊಳಿಸಲು ಪ್ರೇರೇಪಣೆ ನೀಡಿದಂತಾಗುತ್ತದೆ.ಯಾವುದೇ ಪಕ್ಷಗಳಾಗಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ.ಮೃತ ವೇಣುಗೋಪಾಲ ನಾಯಕ್ ರ ಪತ್ನಿ ಈಗಾಗಲೇ ತಮ್ಮ ಅನುಮಾನವನ್ನ ವ್ಯಕ್ತಪಡಿಸಿದ್ದಾರೆ.ಪುನೀತ್ ರಾಜ್ ಕುಮಾರ್ ಫೋಟೋ ಬಳಸಿದ ವಿಚಾರದಲ್ಲಿ ಗಲಾಟೆ ನಡೆದಿತ್ತು.ರಾಜಿ ಸಂಧಾನ ಮಾಡಿಕೊಳ್ಳಲು ಕರೆಸಿ ಹತ್ಯೆ ಮಾಡಿದ್ದಾರೆಂದು ಹೇಳಿಕೆ ನೀಡಿದ್ದಾರೆ.ಹೀಗಿದ್ದರೂ ಕೋಮುಗಲಭೆ ಸೃಷ್ಟಿಯಾಗುವಂತಹ ಹೇಳಿಕೆಗಳು ಬರುತ್ತಿವೆ.ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ನಡೆದ ಇಂತಹ ಘಟನೆಗಳ ವೇಳೆ ಇಂತಹ ಹೇಳಿಕೆಗಳು ಸಾಕಷ್ಟು ಎಡವಟ್ಟು ಮಾಡಿರುವ ಉದಾಹರಣೆಗಳು ಇವೆ.ಜ‌ನರ ಮಧ್ಯೆ ಕೋಮು ಧ್ವೇಷ ಸೃಷ್ಟಿಸುವ ಇಂತಹ ಪ್ರಯತ್ನಗಳಿಗೆ ಕಡಿವಾಣ ಬೀಳಬೇಕಿದೆ.ಇಂತಹ ಸೂಕ್ಷ್ಮ ವಿಚಾರಗಳನ್ನ ರಾಜಕೀಯವಾಗಿ ಲಾಭ ಪಡೆಯಲು ನಡೆಸುವ ಹುನ್ನಾರಕ್ಕೆ ಬ್ರೇಕ್ ಹಾಕಬೇಕಿದೆ.ಹತ್ಯೆಗೆ ಕಾರಣವಾದ ಸತ್ಯಾಂಶವನ್ನ ಪೊಲೀಸರು ಆದಷ್ಟು ಬೇಗ ಭೇಧಿಸಿ ಬಹಿರಂಗಪಡಿಸಿದರೆ ಸಾಮಾನ್ಯ ಜನರಲ್ಲಿ ಮೂಡಿರುವ ಗೊಂದಲಗಳು ನಿವಾರಣೆಯಾಗಲಿದೆ.ಈ ಸಂಧರ್ಭದಲ್ಲಿ ಪೊಲೀಸರ ಪಾತ್ರ ಪ್ರಾಮುಖ್ಯತೆ ಪಡೆಯುತ್ತದೆ.ಯಾವುದೇ ಒತ್ತಡ ಹೇರದೆ ತೆನಿಖೆ ನಡೆಸಲು ರಾಜಕೀಯ ನಾಯಕರು ಅವಕಾಶ ಕಲ್ಪಿಸಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *