ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ…

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ…

ಮೈಸೂರು,ಜು12,Tv10 ಕನ್ನಡ
ಟಿ.ನರಸೀಪುರದಲ್ಲಿ ಹನುಮಜಯಂತಿ ಆಚರಣೆ ವೇಳೆ ಹತ್ಯೆಯಾದ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ.ಸರ್ಕಾರಾಧಿಕಾರಕ್ಕೆ ಬರುತ್ತಿದ್ದಂತೆಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಹೇಳಿಕೆಗಳು ಸಹಜವಾಗಿ ಕೇಳಿ ಬರುತ್ತಿದೆ.ಸರ್ಕಾರದ ವಿರುದ್ದ ಎಂದಿನಂತೆ ವಿರೋಧ ಪಕ್ಷಗಳು ವಾಗ್ಧಾಳಿ ಶುರುಮಾಡಿವೆ. ಈಗಾಗಲೇ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ವೇಳೆ ಬೈಕ್ ಪಾರ್ಕಿಂಗ್ ಹಾಗೂ ಹನುಮಜಯಂತಿ ಆಚರಣೆ ವೇಳೆ ಪುನೀತ್ ರಾಜ್ ಕುಮಾರ್ ಫೋಟೋ ಬಳಸಿದ ಹಿನ್ನಲೆ ಕೊಲೆ ನಡೆದಿದೆ ಎಂಬ ವಿಚಾರ ವನ್ನ ಬಹಿರಂಗಪಡಿಸಿದ್ದಾರೆ.ಈ ಸಂಭಂಧ ನಾಲ್ವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಘಟನೆ ಅತ್ಯಂತ ಸೂಕ್ಷ್ಮವಾಗಿರುವ ಹಿನ್ನಲೆ ಪೊಲೀಸರು ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ.ಹೀಗಿದ್ದರೂ ವಾಗ್ಧಾಳಿಗಳಿಗೆ ಅಂಕುಶವಿಲ್ಲದಂತೆ ಸಾಗಿದೆ.ಇಂತಹ ಘಟನೆಗಳು ನಡೆದಾಗ ಯಾವುದೇ ವಿರೋಧ ಪಕ್ಷಗಳು ಲಾಭ ಮಾಡಿಕೊಳ್ಳಲು ಯತ್ನಿಸುವುದು ಸಹಜ.ಆದ್ರೆ ಇಂತಹ ವಿಚಾರದಲ್ಲಿ ರಾಜಕೀಯ ನಾಯಕರು ನೀಡುವ ಹೇಳಿಕೆಗಳು ಪರಿಸ್ಥಿತಿಯನ್ನ ಉಲ್ಭಣಗೊಳಿಸಲು ಪ್ರೇರೇಪಣೆ ನೀಡಿದಂತಾಗುತ್ತದೆ.ಯಾವುದೇ ಪಕ್ಷಗಳಾಗಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ.ಮೃತ ವೇಣುಗೋಪಾಲ ನಾಯಕ್ ರ ಪತ್ನಿ ಈಗಾಗಲೇ ತಮ್ಮ ಅನುಮಾನವನ್ನ ವ್ಯಕ್ತಪಡಿಸಿದ್ದಾರೆ.ಪುನೀತ್ ರಾಜ್ ಕುಮಾರ್ ಫೋಟೋ ಬಳಸಿದ ವಿಚಾರದಲ್ಲಿ ಗಲಾಟೆ ನಡೆದಿತ್ತು.ರಾಜಿ ಸಂಧಾನ ಮಾಡಿಕೊಳ್ಳಲು ಕರೆಸಿ ಹತ್ಯೆ ಮಾಡಿದ್ದಾರೆಂದು ಹೇಳಿಕೆ ನೀಡಿದ್ದಾರೆ.ಹೀಗಿದ್ದರೂ ಕೋಮುಗಲಭೆ ಸೃಷ್ಟಿಯಾಗುವಂತಹ ಹೇಳಿಕೆಗಳು ಬರುತ್ತಿವೆ.ಹಿಂದಿನ ಸರ್ಕಾರಗಳ ಆಡಳಿತದ ಅವಧಿಯಲ್ಲಿ ನಡೆದ ಇಂತಹ ಘಟನೆಗಳ ವೇಳೆ ಇಂತಹ ಹೇಳಿಕೆಗಳು ಸಾಕಷ್ಟು ಎಡವಟ್ಟು ಮಾಡಿರುವ ಉದಾಹರಣೆಗಳು ಇವೆ.ಜ‌ನರ ಮಧ್ಯೆ ಕೋಮು ಧ್ವೇಷ ಸೃಷ್ಟಿಸುವ ಇಂತಹ ಪ್ರಯತ್ನಗಳಿಗೆ ಕಡಿವಾಣ ಬೀಳಬೇಕಿದೆ.ಇಂತಹ ಸೂಕ್ಷ್ಮ ವಿಚಾರಗಳನ್ನ ರಾಜಕೀಯವಾಗಿ ಲಾಭ ಪಡೆಯಲು ನಡೆಸುವ ಹುನ್ನಾರಕ್ಕೆ ಬ್ರೇಕ್ ಹಾಕಬೇಕಿದೆ.ಹತ್ಯೆಗೆ ಕಾರಣವಾದ ಸತ್ಯಾಂಶವನ್ನ ಪೊಲೀಸರು ಆದಷ್ಟು ಬೇಗ ಭೇಧಿಸಿ ಬಹಿರಂಗಪಡಿಸಿದರೆ ಸಾಮಾನ್ಯ ಜನರಲ್ಲಿ ಮೂಡಿರುವ ಗೊಂದಲಗಳು ನಿವಾರಣೆಯಾಗಲಿದೆ.ಈ ಸಂಧರ್ಭದಲ್ಲಿ ಪೊಲೀಸರ ಪಾತ್ರ ಪ್ರಾಮುಖ್ಯತೆ ಪಡೆಯುತ್ತದೆ.ಯಾವುದೇ ಒತ್ತಡ ಹೇರದೆ ತೆನಿಖೆ ನಡೆಸಲು ರಾಜಕೀಯ ನಾಯಕರು ಅವಕಾಶ ಕಲ್ಪಿಸಬೇಕಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *