ಜುಲೈ 15 ರಂದು ಸಾಂಸ್ಕೃತಿಕ ಹಬ್ಬ: ಕುಲಪತಿ ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ವತಿಯಿಂದ ಜುಲೈ 15 ರಂದು ಬೆಳಿಗ್ಗೆ 9 ಗಂಟೆಗೆ ಮೊದಲ ಬಾರಿಗೆ ವಿವಿ ಆವರಣದಲ್ಲಿ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು.

ಅವರು ಇಂದು ಮಂಡ್ಯ ವಿವಿ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಮಂಡ್ಯ ವಿಶ್ವವಿದ್ಯಾಲಯಕ್ಕೆ 2023-24ನೇ ಶೈಕ್ಷಣಿಕ ವರ್ಷದಿಂದ ಮಂಡ್ಯ ಜಿಲ್ಲೆಯ 47 ಕಾಲೇಜಿನ 25 ಸಾವಿರ ಮಕ್ಕಳು ಕೂಡ ವಿವಿಗೆ ಒಳಪಡುತ್ತಾರೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದರು‌.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಿದ್ದು, ಶಾಸಕ ಪಿ ರವಿಕುಮಾರ್ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜುನಾಥ್, ಕೆ.ಎಂ ಉದಯ್ ಭಾಗವಹಿಸಲಿದ್ದಾರೆ ಎಂದರು‌.

ಈ ಸಾಂಸ್ಕೃತಿಕ ಹಬ್ಬದಲ್ಲಿ 4000 ಮಕ್ಕಳು ಭಾಗಿಯಾಗಲಿದ್ದು, ಫ್ಯಾಷನ್ ಸೋ, ಜಾನಪದ ಕಲೆ, ಎಥ್ನಿಕ್ ವೇರ್, ಕ್ಯಾಂಡಿಡ್ ಫೋಟೋ, ಗ್ರೂಪ್ ಫೋಟೋ, ಆಹಾರದ ಮಳಿಗೆ, ತಿಂಡಿ ಪ್ರದರ್ಶನ, ಜಾನಪದ ಉತ್ಸವ ಹಾಗೂ ಮಾರಾಟ ಮಳಿಗೆ ಸೇರಿದಂತೆ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದಲ್ಲಿ ಪಾಲ್ಗೊಂಡವರಿಗೆ ಪ್ರೊತ್ಸಾಹ ನೀಡಿ ಗೌರವಿಸಲಾಗುತ್ತದೆ ಎಂದರು‌.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *