ಪತ್ನಿಯನ್ನ ಭೀಕರವಾಗಿ ಕೊಂದ ಪತಿ…ಹತ್ಯೆಗೈದು ಜಗುಲಿಯ ಮೇಲೆ ಕುಳಿತಿದ್ದ ಕ್ರೂರಿ…

ಮೈಸೂರು,ಜು15,Tv10 ಕನ್ನಡ
ತವರು ಮನೆ ಸೇರಿದ ಪತ್ನಿಯನ್ನ ಭೀಕರವಾಗಿ ಕೊಂದ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ.ಅಡ್ಡ ಬಂದ ಅತ್ತೆಯನ್ನೂ ಕೊಲೆ ಮಾಡಲು ಯತ್ನಿಸಿದ್ದಾನೆ.ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಘಟನೆ ನಡೆದಿದೆ.ತವರು ಮನೆಗೆ ಕರೆದೊಯ್ಯಲು ಬಂದ ಪತಿರಾಯ ಬ್ಯಾಗ್ ನಲ್ಲಿ ತಂದಿದ್ದ ಚಾಕುವಿನಿಂದ ಮನಸೋ ಇಚ್ಛೆ ಇರಿದು ಕೊಂದಿದ್ದಾನೆ.ಮಗಳನ್ನ ಉಳಿಸಿಕೊಳ್ಳಲು ಬಂದ ತಾಯಿ ಮೇಲೂ ಇರಿಯಲು ಯತ್ನಿಸಿದ್ದಾನೆ.ಹರ್ಷಿತಾ(21) ಮೃತ ದುರ್ದೈವಿ.ಮಾದೇಶ(30) ಪತ್ನಿಯನ್ನ ಇರಿದು ಕೊಂದ ಪತಿರಾಯ.ಘಟನೆಯಲ್ಲಿ ಗಾಯಗೊಂಡ ಅತ್ತೆ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಹರ್ಷಿತಾಳನ್ನ ಗುಂಡ್ಲುಪೇಟೆ ತಾಲೂಕಿನ ಬೇರಂಬಳ್ಳಿ ಗ್ರಾಮದ ಮಾದೇಶ ಒಂದು ವರ್ಷದ ಹಿಂದೆ ಮದುವೆ ಆಗಿದ್ದ.ಪ್ರಾರಂಭದ ದಿನಗಳಲ್ಲಿ ಅನ್ಯೋನ್ಯತೆಯಿಂದ ಇದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ವಿರಸ ಮೂಡಿದೆ.ಆಗಾಗ ಕಿರಿಕ್ ಮಾಡುತ್ತಿದ್ದ ಮಾದೇಶ್ ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದ.ಜೊತೆಯಾಗಿ ಮಲಗುವ ವೇಳೆ ಸಮೀಪ ಮೊಚ್ಚು ಇಟ್ಟುಕೊಳ್ಳುತ್ತಿದ್ದ ಮಾದೇಶನ ವರ್ತನೆಗೆ ಹೆದರಿದ ಹರ್ಷಿತಾ ತವರು ಮನೆ ಸೇರಿದ್ದಾಳೆ.ಆಗಾಗ ಪತ್ನಿಯನ್ನ ತನ್ನ ಮನೆಗ ಕರೆದೊಯ್ಯಲು ಮಾದೇಶ ಯತ್ನಿಸಿ ವಿಫಲನಾಗಿದ್ದಾನೆ.

ಇಂದು ಮೈಸೂರಿನ ಕುಂಬಾರಕೊಪ್ಪಲಿನ ಮನೆಗೆ ಬ್ಯಾಗ್ ನಲ್ಲಿ ಚಾಕು ಇಟ್ಟುಕೊಂಡು ಬಂದಿದ್ದಾನೆ.ಮನೆಗೆ ಬರುವಂತೆ ಕರೆದಿದ್ದಾನೆ.ನಿರಾಕರಿಸಿದ ಹರ್ಷಿತಾಳನ್ನ ಚಾಕುವಿನಿಂದ ಇರಿದು ಕೊಂಡು ಅಡ್ಡಬಂದ ಅತ್ತೆಗೂ ಹಲ್ಲೆ ಮನೆ ಮುಂದಿದ್ದ ಜಗುಲಿ ಮೇಲೆ ಕುಳಿತಿದ್ದಾನೆ.ಮಾಹಿತಿ ಅರಿತ ಮೇಟಗಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಶಕ್ಕೆ ಪಡೆದಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *