ಪತ್ನಿಯನ್ನ ಭೀಕರವಾಗಿ ಕೊಂದ ಪತಿ…ಹತ್ಯೆಗೈದು ಜಗುಲಿಯ ಮೇಲೆ ಕುಳಿತಿದ್ದ ಕ್ರೂರಿ…

ಮೈಸೂರು,ಜು15,Tv10 ಕನ್ನಡ
ತವರು ಮನೆ ಸೇರಿದ ಪತ್ನಿಯನ್ನ ಭೀಕರವಾಗಿ ಕೊಂದ ಪತಿರಾಯ ಪೊಲೀಸರ ಅತಿಥಿಯಾಗಿದ್ದಾನೆ.ಅಡ್ಡ ಬಂದ ಅತ್ತೆಯನ್ನೂ ಕೊಲೆ ಮಾಡಲು ಯತ್ನಿಸಿದ್ದಾನೆ.ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಘಟನೆ ನಡೆದಿದೆ.ತವರು ಮನೆಗೆ ಕರೆದೊಯ್ಯಲು ಬಂದ ಪತಿರಾಯ ಬ್ಯಾಗ್ ನಲ್ಲಿ ತಂದಿದ್ದ ಚಾಕುವಿನಿಂದ ಮನಸೋ ಇಚ್ಛೆ ಇರಿದು ಕೊಂದಿದ್ದಾನೆ.ಮಗಳನ್ನ ಉಳಿಸಿಕೊಳ್ಳಲು ಬಂದ ತಾಯಿ ಮೇಲೂ ಇರಿಯಲು ಯತ್ನಿಸಿದ್ದಾನೆ.ಹರ್ಷಿತಾ(21) ಮೃತ ದುರ್ದೈವಿ.ಮಾದೇಶ(30) ಪತ್ನಿಯನ್ನ ಇರಿದು ಕೊಂದ ಪತಿರಾಯ.ಘಟನೆಯಲ್ಲಿ ಗಾಯಗೊಂಡ ಅತ್ತೆ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಹರ್ಷಿತಾಳನ್ನ ಗುಂಡ್ಲುಪೇಟೆ ತಾಲೂಕಿನ ಬೇರಂಬಳ್ಳಿ ಗ್ರಾಮದ ಮಾದೇಶ ಒಂದು ವರ್ಷದ ಹಿಂದೆ ಮದುವೆ ಆಗಿದ್ದ.ಪ್ರಾರಂಭದ ದಿನಗಳಲ್ಲಿ ಅನ್ಯೋನ್ಯತೆಯಿಂದ ಇದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ವಿರಸ ಮೂಡಿದೆ.ಆಗಾಗ ಕಿರಿಕ್ ಮಾಡುತ್ತಿದ್ದ ಮಾದೇಶ್ ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದ.ಜೊತೆಯಾಗಿ ಮಲಗುವ ವೇಳೆ ಸಮೀಪ ಮೊಚ್ಚು ಇಟ್ಟುಕೊಳ್ಳುತ್ತಿದ್ದ ಮಾದೇಶನ ವರ್ತನೆಗೆ ಹೆದರಿದ ಹರ್ಷಿತಾ ತವರು ಮನೆ ಸೇರಿದ್ದಾಳೆ.ಆಗಾಗ ಪತ್ನಿಯನ್ನ ತನ್ನ ಮನೆಗ ಕರೆದೊಯ್ಯಲು ಮಾದೇಶ ಯತ್ನಿಸಿ ವಿಫಲನಾಗಿದ್ದಾನೆ.

ಇಂದು ಮೈಸೂರಿನ ಕುಂಬಾರಕೊಪ್ಪಲಿನ ಮನೆಗೆ ಬ್ಯಾಗ್ ನಲ್ಲಿ ಚಾಕು ಇಟ್ಟುಕೊಂಡು ಬಂದಿದ್ದಾನೆ.ಮನೆಗೆ ಬರುವಂತೆ ಕರೆದಿದ್ದಾನೆ.ನಿರಾಕರಿಸಿದ ಹರ್ಷಿತಾಳನ್ನ ಚಾಕುವಿನಿಂದ ಇರಿದು ಕೊಂಡು ಅಡ್ಡಬಂದ ಅತ್ತೆಗೂ ಹಲ್ಲೆ ಮನೆ ಮುಂದಿದ್ದ ಜಗುಲಿ ಮೇಲೆ ಕುಳಿತಿದ್ದಾನೆ.ಮಾಹಿತಿ ಅರಿತ ಮೇಟಗಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಶಕ್ಕೆ ಪಡೆದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *