ಕೆಲಸವನ್ನು ನಿರ್ವಹಿಸಬೇಕಾದರೆ ಶಿಸ್ತು ಅತಿಮುಖ್ಯ : ಡಾ.ಕುಮಾರ

ಮಂಡ್ಯ,ಜು,17:-ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವುದು ಭಾಗ್ಯ ಮತ್ತು ಪುಣ್ಯದ ಕೆಲಸವಾಗಿದ್ದು ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವವರು ಬಹಳ ಶಿಸ್ತಿನಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ರವರು ಹೇಳಿದರು

ಜಿಲ್ಲಾಡಳಿತ ಇವರ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಇಂದಿನಿಂದ ಜುಲೈ28 ರವರೆಗೆ ನಡೆಸಲಾಗುತ್ತಿರುವ
ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮವನ್ನು
ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸಿಗುವ ಗೌರವಕ್ಕಿಂತ ಹೆಚ್ಚಿನ ಗೌರವವನ್ನು ಜನಸಾಮಾನ್ಯರು ನೀಡುತ್ತಾರೆ ಆದ್ದರಿಂದ ಕಂದಾಯ ಇಲಾಖೆಯನ್ನ ಮಾತೃ ಇಲಾಖೆ ಎಂದು ಕರೆಯಲಾಗಿದೆ ಎಂದು ಹೇಳಿದರು.

ಗ್ರಾಮಗಳಲ್ಲಿ ಎಲ್ಲರೂ ಈ ಇಲಾಖೆಯನ್ನು ವಿಶೇಷವಾಗಿ ನೋಡುವರು ಕಂದಾಯ ಇಲಾಖೆಗೆ ಅದರದ್ದೇ ಆದ ಪ್ರಾಮಾಣಿಕವಾದ ಮತ್ತು ಪವಿತ್ರವಾದ ಮಹತ್ವವಿದ್ದು ಇಲ್ಲಿ ಕೆಲಸ ಮಾಡುತ್ತಿದ್ದೀರಿ ಎಂದರೆ ನಿಮಗೆ ಇದರಲ್ಲಿ ಅಭಿಮಾನ ಮತ್ತು ಹೆಮ್ಮೆ ಇರಬೇಕು ಎಂದರು.

ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕಾದರೆ ಯಾವುದೇ ಅಮಿಷಕ್ಕು ಒಳಗಾಗದೆ ಸಮಗ್ರತೆ ಮತ್ತು ನಿಷ್ಠೆಯಿಂದ ಕೆಲಸವನ್ನು ನಿರ್ವಹಿಸಬೇಕು ಆಗ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ ಎಂದರು.

ಕಂದಾಯ ಇಲಾಖೆಯ ಕಾರ್ಯಚಟವಟಿಕೆಯನ್ನು ತಹಶೀಲ್ದಾರ್, ಅಪರ ಜಿಲ್ಲಾಧಿಕಾರಿ, ಜಿಲ್ಲಾಧಿಕಾರಿ ಹೀಗೆ ಹಲವು ಮೇಲ್ಮಟ್ಟದ ಅಧಿಕಾರಿಗಳು ಗಮನಿಸುತ್ತಾರೆ ಗಮನಿಸುತ್ತಾರೆ. ಆದ್ದರಿಂದ ಕಂದಾಯ ಇಲಾಖೆಗೆ ತನ್ನದೇ ಆದ ಮಹತ್ವ ಇದೆ ಎಂದರು.

ಕಂದಾಯ ಇಲಾಖೆಗೆ ಹೆಚ್ಚಾಗಿ ರೈತರು ಬಡವರು ತಮ್ಮ ಕೆಲಸಕ್ಕಾಗಿ ಬರುತ್ತಾರೆ ಆದ್ದರಿಂದ ವಿನಮ್ರತೆ ಹಾಗೂ ತಾಳ್ಮೆ ಯಿಂದ ವರ್ತಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ರವರು ಮಾತನಾಡಿದರು.

ನಾವು ಕೆಲಸ ನಿರ್ವಹಿಸುತ್ತಿರುವುದು ಜನ ಸಾಮಾನ್ಯರ ಮಧ್ಯೆ ಯಾವುದೇ ಹಸ್ತಕ್ಷೇಪವಿಲ್ಲದೆ ಕೆಲಸ ನಿರ್ವಹಿಸಬೇಕು ಜನರ ಸೇವೆ ಜನಾರ್ದನ ಸೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ರಾಜಲಕ್ಷ್ಮಿ ಹೆಚ್, ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯರಾದ ಆನಂದ್ ಎ.ಎನ್, ಜಿಲ್ಲಾ ತರಬೇತಿ ಸಂಸ್ಥೆಯ ಭೋದಕರಾದ ನಾಗೇಶ್ ಎಸ್ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *