ಸಾರ್ವಜನಿಕರಿಗೆ ಅಭಯ…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…ನೈಟ್ ಬೀಟ್ ಬಿಗಿಗೊಳಿಸಿದ ಉದಯಗಿರಿ ಠಾಣಾ ಪೊಲೀಸರು…

ಸಾರ್ವಜನಿಕರಿಗೆ ಅಭಯ…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…ನೈಟ್ ಬೀಟ್ ಬಿಗಿಗೊಳಿಸಿದ ಉದಯಗಿರಿ ಠಾಣಾ ಪೊಲೀಸರು…

ಮೈಸೂರು,ಜುಲೈ18,Tv10 ಕನ್ನಡ
ರಾತ್ರಿ ವೇಳೆ ಕೈಚಳಕ ನಡೆಸುವ ಕಿಡಿಗೇಡಿಗಳಿಗೆ ಉದಯಗಿರಿ ಠಾಣಾ ಪೊಲೀಸರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ರಾತ್ರಿ ಗಸ್ತನ್ನ ಬಿಗಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಉದಯಗಿರಿಯ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಉದಯಗಿರಿ ಠಾಣಾ ಸಿಬ್ಬಂದಿಗಳಿಗೆ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರು ರಾತ್ರಿ ಗಸ್ತಿನ ಬಗ್ಗೆ ಖಡಕ್ ಸೂಚನೆ ನೀಡಿದ್ದಾರೆ.ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.ಕಿಡಿಗೇಡಿಗಳ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ತಿಳಿಸಿದ್ದಾರೆ.ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ವಶಕ್ಕೆ ಪಡೆದು ತೀವ್ರ ತಪಾಸಣೆಗೆ ಒಳಪಡಿಸುವಂತೆ ತಿಳಿಸಿದ್ದಾರೆ.ಇದುವರೆಗೆ ನೈಟ್ ಬೀಟ್ ಕರ್ತವ್ಯ ನಿಯೋಜನೆ ಕಾರ್ಯ ಠಾಣೆಯಲ್ಲೇ ನಡೆಯುತ್ತಿತ್ತು.ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿಗಳ ನಿಯೋಜನೆ ಮಾಡುವ ಮೂಲಕ ಸಾರ್ವಜನಿಕರಿಗೆ ಪೊಲೀಸರ ಕಾರ್ಯವೈಖರಿ ಬಗ್ಗೆ ಭರವಸೆ ಹುಟ್ಟಿಸುವ ಕೆಲಸ ಮಾಡಲಾಗುತ್ತಿದ್ದು ಇಂದು ಡಾ.ರಾಜ್ ಕುಮಾರ್ ರಸ್ತೆಯಲ್ಲಿ ರಾತ್ರಿ ಪಾಳಿ ಕೆಲಸ ನಿಯೋಜನೆ ಮಾಡುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಸೂಚನೆ ಮೇರೆಗೆ ರಾತ್ರಿ ಗಸ್ತನ್ನ ಬಿಗಿಗೊಳಿಸಲಾಗಿದೆ.ಈ ವೇಳೆ ಉದಯಗಿರಿ ಠಾಣೆ ನಿರೀಕ್ಷಕರಾದ ರಾಜು,ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *