ಸಾರ್ವಜನಿಕರಿಗೆ ಅಭಯ…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…ನೈಟ್ ಬೀಟ್ ಬಿಗಿಗೊಳಿಸಿದ ಉದಯಗಿರಿ ಠಾಣಾ ಪೊಲೀಸರು…

ಸಾರ್ವಜನಿಕರಿಗೆ ಅಭಯ…ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ…ನೈಟ್ ಬೀಟ್ ಬಿಗಿಗೊಳಿಸಿದ ಉದಯಗಿರಿ ಠಾಣಾ ಪೊಲೀಸರು…

ಮೈಸೂರು,ಜುಲೈ18,Tv10 ಕನ್ನಡ
ರಾತ್ರಿ ವೇಳೆ ಕೈಚಳಕ ನಡೆಸುವ ಕಿಡಿಗೇಡಿಗಳಿಗೆ ಉದಯಗಿರಿ ಠಾಣಾ ಪೊಲೀಸರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ರಾತ್ರಿ ಗಸ್ತನ್ನ ಬಿಗಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಉದಯಗಿರಿಯ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಉದಯಗಿರಿ ಠಾಣಾ ಸಿಬ್ಬಂದಿಗಳಿಗೆ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರು ರಾತ್ರಿ ಗಸ್ತಿನ ಬಗ್ಗೆ ಖಡಕ್ ಸೂಚನೆ ನೀಡಿದ್ದಾರೆ.ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.ಕಿಡಿಗೇಡಿಗಳ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ತಿಳಿಸಿದ್ದಾರೆ.ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ವಶಕ್ಕೆ ಪಡೆದು ತೀವ್ರ ತಪಾಸಣೆಗೆ ಒಳಪಡಿಸುವಂತೆ ತಿಳಿಸಿದ್ದಾರೆ.ಇದುವರೆಗೆ ನೈಟ್ ಬೀಟ್ ಕರ್ತವ್ಯ ನಿಯೋಜನೆ ಕಾರ್ಯ ಠಾಣೆಯಲ್ಲೇ ನಡೆಯುತ್ತಿತ್ತು.ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿಗಳ ನಿಯೋಜನೆ ಮಾಡುವ ಮೂಲಕ ಸಾರ್ವಜನಿಕರಿಗೆ ಪೊಲೀಸರ ಕಾರ್ಯವೈಖರಿ ಬಗ್ಗೆ ಭರವಸೆ ಹುಟ್ಟಿಸುವ ಕೆಲಸ ಮಾಡಲಾಗುತ್ತಿದ್ದು ಇಂದು ಡಾ.ರಾಜ್ ಕುಮಾರ್ ರಸ್ತೆಯಲ್ಲಿ ರಾತ್ರಿ ಪಾಳಿ ಕೆಲಸ ನಿಯೋಜನೆ ಮಾಡುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಸೂಚನೆ ಮೇರೆಗೆ ರಾತ್ರಿ ಗಸ್ತನ್ನ ಬಿಗಿಗೊಳಿಸಲಾಗಿದೆ.ಈ ವೇಳೆ ಉದಯಗಿರಿ ಠಾಣೆ ನಿರೀಕ್ಷಕರಾದ ರಾಜು,ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *