ಬೆಂಗಳೂರಿನಲ್ಲಿ ಐದು ಮಂದಿ ಶಂಕಿತ ಉಗ್ರರ ಬಂಧನ…ರಾಜಧಾನಿಯಲ್ಲಿ ಆತಂಕ…

ಬೆಂಗಳೂರು,ಜು19,Tv10 ಕನ್ನಡ ಎನ್.ಐ.ಎ.ಹಾಗೂ ಸಿಸಿಬಿ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರು ‌ಮಹಾನಗರದಲ್ಲಿ
ಐದು ಮಂದಿ ಶಂಕಿತ ಉಗ್ರರ‌ಉ ಸೆರೆ ಸಿಕ್ಕಿದ್ದಾರೆ.ಶಂಕಿತರ ಬಂಧನ ಸುದ್ದಿ ಹರಡುತ್ತಿದ್ದಂತೆ ನಗರದ ಜನತೆ ಆತಂಕಕ್ಕೀಡಾಗಿದ್ದಾರೆ.
ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐದು ಮಂದಿ ಶಂಕಿತ ಉಗ್ರರನ್ನು ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು
ಜನರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್ ರಬ್ಬಾನಿ ಬಂಧಿತ ಶಂಕಿತ ಉಗ್ರರು.ಆದರೆ, ಈ ತಂಡದ ನಾಯಕ ಜುನೈದ್ ನಾಪತ್ತೆಯಾಗಿದ್ದಾನೆ,
ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ಶಂಕಿತರ ಮೇಲೆ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಂಕಿತ ಉಗ್ರರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಆರ್‌ಟಿ ನಗರದ ಸುಲ್ತಾಲ್ ಪಾಳ್ಯದ ಮನೆಯೊಂದರಲ್ಲಿ ಶಂಕಿತರು ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಶಂಕಿತರಿಂದ 12 ಮೊಬೈಲ್ ಫೋನ್‌ಗಳು, ಒಂದು ಡ್ರ್ಯಾಗರ್,ವಾಕಿಟಾಕಿ ಸೆಟ್ಸ್, ಎರಡು ಸ್ಯಾಟಲೈಟ್‌ ಫೋನ್‌, 7 ಕಂಟ್ರಿ ಮೇಡ್ ಪಿಸ್ತೂಲ್, 45 ಜೀವಂತ‌ ಮದ್ದು ಗುಂಡುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್​ ಸಂಚು ರೂಪಿಸಿದ್ದ. ಟಿ.ನಸೀರ್​​​ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್ ​ಗಳಾಗಿದ್ದು, ಸದ್ಯ ಟಿ.ನಸೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ.ಆರೋಪಿಗಳಿಗೆ ಆನ್​ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ತಿಳಿಯಲು ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.ಕೆಲವರು ಈ ಹಿಂದೆ ಕೊಲೆ, ದರೋಡೆ, ರಕ್ತ ಚಂದನ ಕಳವು ಮುಂತಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಿಸಿಬಿ ಜಾಯಿಂಟ್ ಕಮಿಷನರ್ ಡಾ.ಶರಣಪ್ಪ ಹಾಜರಿದ್ದರು….

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *