ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ.


ಬೆಂಗಳೂರು ಜುಲೈ,19,2023(tv10kannada ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ.
ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಎರಡು ದಿನಗಳ ಮೊದಲು ದಲಿತ ಸಮುದಾಯಗಳ ಮುಖಂಡರು, ವಕೀಲರುಗಳ ಸಭೆ ನಡೆಸಿದ್ದರು. ಈ ಸಭೆಯಲ್ಲಿ ವ್ಯಕ್ತವಾದ ಒಕ್ಕೋರಲ ತೀರ್ಮಾನದಂತೆ ದೂರು ದಾಖಲಿಸಲು ಕಾಲಮಿತಿ ತೆಗೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಚಾರಿತ್ರಿಕ ಹೆಜ್ಜೆ ಇಟ್ಟಿದೆ.

ತಿದ್ದುಪಡಿಯಲ್ಲಿ ಏನಿದೆ….

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್‌ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
2023-24ನೇ ಆಯವ್ಯಯದಲ್ಲಿ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಇನ್ನಷ್ಟು ಬಲಪಡಿಸುವ ಕುರಿತು ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತುತ ಅಧಿವೇಶನದಲ್ಲಿಯೇ ತಿದ್ದುಪಡಿ ಮಂಡಿಸುವ ಗುರಿಯೊಂದಿಗೆ ಮುಂದಡಿಯಿಟ್ಟಿದ್ದಾರೆ. ಜುಲೈ 17 ರಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದಿದ್ದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿಗೆ ಅನುಮೋದನೆ ಪಡೆದುಕೊಂಡು ವಿಧಾನಮಂಡಲದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಸಮುದಾಯಗಳ ಹಿತರಕ್ಷಣೆ ಕುರಿತು ತಮ್ಮ ಬದ್ಧತೆಯನ್ನು ಮುಖ್ಯಮಂತ್ರಿಗಳು ಪ್ರದರ್ಶಿಸಿದ್ದಾರೆ ಹಾಗೂ ನುಡಿದಂತೆ ನಡೆಯುವ ಸರ್ಕಾರ ತಮ್ಮದು ಎಂದು ಸಾಬೀತು ಪಡಿಸಿದ್ದಾರೆ.

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *