ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ.


ಬೆಂಗಳೂರು ಜುಲೈ,19,2023(tv10kannada ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ.
ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಎರಡು ದಿನಗಳ ಮೊದಲು ದಲಿತ ಸಮುದಾಯಗಳ ಮುಖಂಡರು, ವಕೀಲರುಗಳ ಸಭೆ ನಡೆಸಿದ್ದರು. ಈ ಸಭೆಯಲ್ಲಿ ವ್ಯಕ್ತವಾದ ಒಕ್ಕೋರಲ ತೀರ್ಮಾನದಂತೆ ದೂರು ದಾಖಲಿಸಲು ಕಾಲಮಿತಿ ತೆಗೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಚಾರಿತ್ರಿಕ ಹೆಜ್ಜೆ ಇಟ್ಟಿದೆ.

ತಿದ್ದುಪಡಿಯಲ್ಲಿ ಏನಿದೆ….

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್‌ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
2023-24ನೇ ಆಯವ್ಯಯದಲ್ಲಿ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಇನ್ನಷ್ಟು ಬಲಪಡಿಸುವ ಕುರಿತು ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತುತ ಅಧಿವೇಶನದಲ್ಲಿಯೇ ತಿದ್ದುಪಡಿ ಮಂಡಿಸುವ ಗುರಿಯೊಂದಿಗೆ ಮುಂದಡಿಯಿಟ್ಟಿದ್ದಾರೆ. ಜುಲೈ 17 ರಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದಿದ್ದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿಗೆ ಅನುಮೋದನೆ ಪಡೆದುಕೊಂಡು ವಿಧಾನಮಂಡಲದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಸಮುದಾಯಗಳ ಹಿತರಕ್ಷಣೆ ಕುರಿತು ತಮ್ಮ ಬದ್ಧತೆಯನ್ನು ಮುಖ್ಯಮಂತ್ರಿಗಳು ಪ್ರದರ್ಶಿಸಿದ್ದಾರೆ ಹಾಗೂ ನುಡಿದಂತೆ ನಡೆಯುವ ಸರ್ಕಾರ ತಮ್ಮದು ಎಂದು ಸಾಬೀತು ಪಡಿಸಿದ್ದಾರೆ.

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *