ಸದನದಲ್ಲಿ ಮೊಳಗಿದ ಮಹಾಘಟಬಂಧನ್ ಸಭೆ ಎಫೆಕ್ಟ್…ಪ್ರತಿಪಕ್ಷಗಳ ಪ್ರತಿಭಟನೆ…

ಬೆಂಗಳೂರು,ಜು19,Tv10 ಕನ್ನಡ
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಘಟಬಂಧನ್ ಸಭೆ ಪ್ರಕ್ರಿಯೆಯಲ್ಲಿ ಐಎಎಸ್ ಅಧಿಕಾರಿಗಳನ್ನ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದವು. ಎರಡು ದಿನಗಳ ಮಹಾಘಟಬಂಧನ್ ಸಭೆಗೆ ಬೇರೆ ರಾಜ್ಯಗಳಿಂದ ಬಂದಿದ್ದ ಗಣ್ಯರ ಅತಿಥಿ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿ ಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿಯ ಆರ್ ಅಶೋಕ್ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ವಿಷಯಗಳಿಗೆ ಬಳಸಿಕೊಂಡು ಶಿಷ್ಟಾಚಾರ ಉಲ್ಲಂಘಿಗಸಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಜೆಡಿಎಸ್ ಸದಸ್ಯರು ಕೂಡ ಧ್ವನಿಗೂಡಿಸಿ ಸರ್ಕಾರದ ನಡೆಯನ್ನು ಖಂಡಿಸಿದರು.ಆಗ ಆಡಳಿತ ಪಕ್ಷದ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದರು.
ಕಾನೂನು ಸಚಿವ ಎಚ್. ಕೆ ಪಾಟೀಲ್ ಮಾತನಾಡಿ ಅಶೋಕ್ ಅವರು ಇಲ್ಲಸಲ್ಲದ ಆರೋಪ ಮಾಡಬಾರದು.
ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕ್ಷುಲ್ಲಕ ಕಾರಣಗಳಿಗೆ ಬಳಸಿಕೊಂಡಿಲ್ಲ, ರಾಜಕೀಯ ನಾಯಕರನ್ನು ಸ್ವಾಗತಿಸಲು ಅವರನ್ನು ಹೋಟೆಲ್ ನಿಂದ ಕರೆತರಲು ಕಳುಹಿಸಲಾಗಿದೆ ಎಂಬ ಆರೋಪ‌ ಸರಿಯಲ್ಲ.
ನಾವು ಶಿಷ್ಟಾಚಾರ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಹಿರಿಯ ಶಾಸಕ ಸುರೇಶ್ ಕುಮಾರ್ ಮಾತನಾಡಿ ಗಣ್ಯರನ್ನು ಕರೆತರಲು ಖಾಸಗಿ ವ್ಯವಸ್ಥೆಯನ್ನು ಮಾಡಬಹುದಾಗಿತ್ತು ಆದರೆ ಐಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂದು ದೂರಿದರು.
ಹೀಗೆ ಒಬ್ಬರಾದ ನಂತರ ಒಬ್ಬರು ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷದವರು ಮುಗಿಬಿದ್ದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಎಲ್ಲರಲ್ಲೂ ದಯಮಾಡಿ ಗಲಾಟೆ ಮಾಡಬೇಡಿ ಸದನ ಮುಂದುವರೆಯಲಿ ಎಂದು ಹೇಳಿದರು.
ಆದರೂ ಬಗ್ಗದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಳಿಗೆ ಪ್ರತಿಭಟನೆ ಮಾಡಿ ಗದ್ದಲ ಎಬ್ಬಿಸಿದರು ಈ ವೇಳೆ‌ ಡಾ.ಅಶ್ವಥ್ ನಾರಾಯಣ ಮತ್ತಿತರರನ್ನು ಮಾರ್ಷಲ್ ಗಳು ಹೊರ ಕಳುಹಿಸಿದ ಪ್ರಸಂಗವು ನಡೆಯಿತು.
ಒಟ್ಟಾರೆ ಪ್ರತಿಪಕ್ಷಗಳ ಗದ್ದಲದಿಂದಾಗಿ ಬುಧವಾರದ ಕಲಾಪ ಸ್ಥಗಿತವಾಯಿತು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *