ಸದನದಲ್ಲಿ ಮೊಳಗಿದ ಮಹಾಘಟಬಂಧನ್ ಸಭೆ ಎಫೆಕ್ಟ್…ಪ್ರತಿಪಕ್ಷಗಳ ಪ್ರತಿಭಟನೆ…

ಬೆಂಗಳೂರು,ಜು19,Tv10 ಕನ್ನಡ
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಘಟಬಂಧನ್ ಸಭೆ ಪ್ರಕ್ರಿಯೆಯಲ್ಲಿ ಐಎಎಸ್ ಅಧಿಕಾರಿಗಳನ್ನ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದವು. ಎರಡು ದಿನಗಳ ಮಹಾಘಟಬಂಧನ್ ಸಭೆಗೆ ಬೇರೆ ರಾಜ್ಯಗಳಿಂದ ಬಂದಿದ್ದ ಗಣ್ಯರ ಅತಿಥಿ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿ ಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿಯ ಆರ್ ಅಶೋಕ್ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ವಿಷಯಗಳಿಗೆ ಬಳಸಿಕೊಂಡು ಶಿಷ್ಟಾಚಾರ ಉಲ್ಲಂಘಿಗಸಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಜೆಡಿಎಸ್ ಸದಸ್ಯರು ಕೂಡ ಧ್ವನಿಗೂಡಿಸಿ ಸರ್ಕಾರದ ನಡೆಯನ್ನು ಖಂಡಿಸಿದರು.ಆಗ ಆಡಳಿತ ಪಕ್ಷದ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದರು.
ಕಾನೂನು ಸಚಿವ ಎಚ್. ಕೆ ಪಾಟೀಲ್ ಮಾತನಾಡಿ ಅಶೋಕ್ ಅವರು ಇಲ್ಲಸಲ್ಲದ ಆರೋಪ ಮಾಡಬಾರದು.
ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕ್ಷುಲ್ಲಕ ಕಾರಣಗಳಿಗೆ ಬಳಸಿಕೊಂಡಿಲ್ಲ, ರಾಜಕೀಯ ನಾಯಕರನ್ನು ಸ್ವಾಗತಿಸಲು ಅವರನ್ನು ಹೋಟೆಲ್ ನಿಂದ ಕರೆತರಲು ಕಳುಹಿಸಲಾಗಿದೆ ಎಂಬ ಆರೋಪ‌ ಸರಿಯಲ್ಲ.
ನಾವು ಶಿಷ್ಟಾಚಾರ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಹಿರಿಯ ಶಾಸಕ ಸುರೇಶ್ ಕುಮಾರ್ ಮಾತನಾಡಿ ಗಣ್ಯರನ್ನು ಕರೆತರಲು ಖಾಸಗಿ ವ್ಯವಸ್ಥೆಯನ್ನು ಮಾಡಬಹುದಾಗಿತ್ತು ಆದರೆ ಐಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂದು ದೂರಿದರು.
ಹೀಗೆ ಒಬ್ಬರಾದ ನಂತರ ಒಬ್ಬರು ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷದವರು ಮುಗಿಬಿದ್ದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಎಲ್ಲರಲ್ಲೂ ದಯಮಾಡಿ ಗಲಾಟೆ ಮಾಡಬೇಡಿ ಸದನ ಮುಂದುವರೆಯಲಿ ಎಂದು ಹೇಳಿದರು.
ಆದರೂ ಬಗ್ಗದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಳಿಗೆ ಪ್ರತಿಭಟನೆ ಮಾಡಿ ಗದ್ದಲ ಎಬ್ಬಿಸಿದರು ಈ ವೇಳೆ‌ ಡಾ.ಅಶ್ವಥ್ ನಾರಾಯಣ ಮತ್ತಿತರರನ್ನು ಮಾರ್ಷಲ್ ಗಳು ಹೊರ ಕಳುಹಿಸಿದ ಪ್ರಸಂಗವು ನಡೆಯಿತು.
ಒಟ್ಟಾರೆ ಪ್ರತಿಪಕ್ಷಗಳ ಗದ್ದಲದಿಂದಾಗಿ ಬುಧವಾರದ ಕಲಾಪ ಸ್ಥಗಿತವಾಯಿತು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *