ಸದನದಲ್ಲಿ ಮೊಳಗಿದ ಮಹಾಘಟಬಂಧನ್ ಸಭೆ ಎಫೆಕ್ಟ್…ಪ್ರತಿಪಕ್ಷಗಳ ಪ್ರತಿಭಟನೆ…

ಬೆಂಗಳೂರು,ಜು19,Tv10 ಕನ್ನಡ
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಘಟಬಂಧನ್ ಸಭೆ ಪ್ರಕ್ರಿಯೆಯಲ್ಲಿ ಐಎಎಸ್ ಅಧಿಕಾರಿಗಳನ್ನ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದವು. ಎರಡು ದಿನಗಳ ಮಹಾಘಟಬಂಧನ್ ಸಭೆಗೆ ಬೇರೆ ರಾಜ್ಯಗಳಿಂದ ಬಂದಿದ್ದ ಗಣ್ಯರ ಅತಿಥಿ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿ ಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿಯ ಆರ್ ಅಶೋಕ್ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ವಿಷಯಗಳಿಗೆ ಬಳಸಿಕೊಂಡು ಶಿಷ್ಟಾಚಾರ ಉಲ್ಲಂಘಿಗಸಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಜೆಡಿಎಸ್ ಸದಸ್ಯರು ಕೂಡ ಧ್ವನಿಗೂಡಿಸಿ ಸರ್ಕಾರದ ನಡೆಯನ್ನು ಖಂಡಿಸಿದರು.ಆಗ ಆಡಳಿತ ಪಕ್ಷದ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದರು.
ಕಾನೂನು ಸಚಿವ ಎಚ್. ಕೆ ಪಾಟೀಲ್ ಮಾತನಾಡಿ ಅಶೋಕ್ ಅವರು ಇಲ್ಲಸಲ್ಲದ ಆರೋಪ ಮಾಡಬಾರದು.
ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕ್ಷುಲ್ಲಕ ಕಾರಣಗಳಿಗೆ ಬಳಸಿಕೊಂಡಿಲ್ಲ, ರಾಜಕೀಯ ನಾಯಕರನ್ನು ಸ್ವಾಗತಿಸಲು ಅವರನ್ನು ಹೋಟೆಲ್ ನಿಂದ ಕರೆತರಲು ಕಳುಹಿಸಲಾಗಿದೆ ಎಂಬ ಆರೋಪ‌ ಸರಿಯಲ್ಲ.
ನಾವು ಶಿಷ್ಟಾಚಾರ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಹಿರಿಯ ಶಾಸಕ ಸುರೇಶ್ ಕುಮಾರ್ ಮಾತನಾಡಿ ಗಣ್ಯರನ್ನು ಕರೆತರಲು ಖಾಸಗಿ ವ್ಯವಸ್ಥೆಯನ್ನು ಮಾಡಬಹುದಾಗಿತ್ತು ಆದರೆ ಐಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂದು ದೂರಿದರು.
ಹೀಗೆ ಒಬ್ಬರಾದ ನಂತರ ಒಬ್ಬರು ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷದವರು ಮುಗಿಬಿದ್ದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಎಲ್ಲರಲ್ಲೂ ದಯಮಾಡಿ ಗಲಾಟೆ ಮಾಡಬೇಡಿ ಸದನ ಮುಂದುವರೆಯಲಿ ಎಂದು ಹೇಳಿದರು.
ಆದರೂ ಬಗ್ಗದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಳಿಗೆ ಪ್ರತಿಭಟನೆ ಮಾಡಿ ಗದ್ದಲ ಎಬ್ಬಿಸಿದರು ಈ ವೇಳೆ‌ ಡಾ.ಅಶ್ವಥ್ ನಾರಾಯಣ ಮತ್ತಿತರರನ್ನು ಮಾರ್ಷಲ್ ಗಳು ಹೊರ ಕಳುಹಿಸಿದ ಪ್ರಸಂಗವು ನಡೆಯಿತು.
ಒಟ್ಟಾರೆ ಪ್ರತಿಪಕ್ಷಗಳ ಗದ್ದಲದಿಂದಾಗಿ ಬುಧವಾರದ ಕಲಾಪ ಸ್ಥಗಿತವಾಯಿತು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *