ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಬೆಂಗಳೂರು,ಜು19,Tv10 ಕನ್ನಡ
ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ,ಕಂದಾಯ ಇಲಾಖೆ ಇತರೆ ಅಧಿಕಾರಿಗಳ ಹಾಗೂ ನೌಕರರ ನಿಯೋಜನೆ ಆದೇಶ ರದ್ದುಪಡಿಸಿ ಮೂಲ ಸ್ಥಾನಕ್ಕೆ ವರದಿ ಮಾಡಿಕೊಳ್ಳಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶವನ್ನ ತಡೆಹಿಡಿಯುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.ಸಂಘದ ವತಿಯಿಂದ ಅಧ್ಯಕ್ಷರಾದ ದೊಡ್ಡಬಸಪ್ಪ ರೆಡ್ಡಿ ರವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಈಗಾಗಲೇ ಸರ್ಕಾರದ 16A ರದ್ದಾಗಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ ಜಿಲ್ಲಾ ವರ್ಗಾವಣೆ ಹೋಗಲು ಅವಕಾಶ ಇರುವುದಿಲ್ಲ ಹೀಗಾಗಿ ಪ್ರಸ್ತುತ ಇರುವ ನಿಯೋಜನೆ ಆದೇಶ ರದ್ದುಪಡಿಸಿದಲ್ಲಿ ನೌಕರರು ಹಾಗೂ ಅಧಿಕಾರಿಗಳ ಕುಟುಂಬದ ಮೇಲೆ ದುಷ್ಪರಿಣಾಮ ಬೀರಿ ಮಾನಸಿಕವಾಗಿ ಜರ್ಜರಿತರಾಗುತ್ತಾರೆ.ಹೀಗಾಗಿ ಕೂಡಲೇ ನಿಯೋಜನೆ ಆದೇಶ ರದ್ದುಪಡಿಸುವುದಕ್ಕೆ ತಡೆಹಾಕುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದೇಶ ರದ್ದುಪಡಿಸಿದಲ್ಲಿ ತಂದೆ ತಾಯಿ ಆರೋಗ್ಯ ನೋಡಿಕೊಳ್ಳುವುದು,ಪತಿ ಪತ್ನಿ ನೌಕರರಾಗಿರುವ ಪ್ರಕರಣದಲ್ಲಿ ಒಂದೇ ಕಡೆ ಜೀವಿಸುವುದು ಮಕ್ಕಳ ವಿಧ್ಯಾಭ್ಯಾಸ ಮಾಡಿಸುವುದು,ಅನಾರೋಗ್ಯ ನೌಕರರು ಆರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಕುಟುಂಬದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *