ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಬೆಂಗಳೂರು,ಜು19,Tv10 ಕನ್ನಡ
ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ,ಕಂದಾಯ ಇಲಾಖೆ ಇತರೆ ಅಧಿಕಾರಿಗಳ ಹಾಗೂ ನೌಕರರ ನಿಯೋಜನೆ ಆದೇಶ ರದ್ದುಪಡಿಸಿ ಮೂಲ ಸ್ಥಾನಕ್ಕೆ ವರದಿ ಮಾಡಿಕೊಳ್ಳಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶವನ್ನ ತಡೆಹಿಡಿಯುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.ಸಂಘದ ವತಿಯಿಂದ ಅಧ್ಯಕ್ಷರಾದ ದೊಡ್ಡಬಸಪ್ಪ ರೆಡ್ಡಿ ರವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಈಗಾಗಲೇ ಸರ್ಕಾರದ 16A ರದ್ದಾಗಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ ಜಿಲ್ಲಾ ವರ್ಗಾವಣೆ ಹೋಗಲು ಅವಕಾಶ ಇರುವುದಿಲ್ಲ ಹೀಗಾಗಿ ಪ್ರಸ್ತುತ ಇರುವ ನಿಯೋಜನೆ ಆದೇಶ ರದ್ದುಪಡಿಸಿದಲ್ಲಿ ನೌಕರರು ಹಾಗೂ ಅಧಿಕಾರಿಗಳ ಕುಟುಂಬದ ಮೇಲೆ ದುಷ್ಪರಿಣಾಮ ಬೀರಿ ಮಾನಸಿಕವಾಗಿ ಜರ್ಜರಿತರಾಗುತ್ತಾರೆ.ಹೀಗಾಗಿ ಕೂಡಲೇ ನಿಯೋಜನೆ ಆದೇಶ ರದ್ದುಪಡಿಸುವುದಕ್ಕೆ ತಡೆಹಾಕುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದೇಶ ರದ್ದುಪಡಿಸಿದಲ್ಲಿ ತಂದೆ ತಾಯಿ ಆರೋಗ್ಯ ನೋಡಿಕೊಳ್ಳುವುದು,ಪತಿ ಪತ್ನಿ ನೌಕರರಾಗಿರುವ ಪ್ರಕರಣದಲ್ಲಿ ಒಂದೇ ಕಡೆ ಜೀವಿಸುವುದು ಮಕ್ಕಳ ವಿಧ್ಯಾಭ್ಯಾಸ ಮಾಡಿಸುವುದು,ಅನಾರೋಗ್ಯ ನೌಕರರು ಆರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಕುಟುಂಬದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *