ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯ ನಿಯೋಜನೆ ಆದೇಶ ರದ್ದುಪಡಿಸುವುದನ್ನ ತಡೆಹಿಡಿಯಿರಿ…ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಮನವಿ…

ಬೆಂಗಳೂರು,ಜು19,Tv10 ಕನ್ನಡ
ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ,ಕಂದಾಯ ಇಲಾಖೆ ಇತರೆ ಅಧಿಕಾರಿಗಳ ಹಾಗೂ ನೌಕರರ ನಿಯೋಜನೆ ಆದೇಶ ರದ್ದುಪಡಿಸಿ ಮೂಲ ಸ್ಥಾನಕ್ಕೆ ವರದಿ ಮಾಡಿಕೊಳ್ಳಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶವನ್ನ ತಡೆಹಿಡಿಯುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.ಸಂಘದ ವತಿಯಿಂದ ಅಧ್ಯಕ್ಷರಾದ ದೊಡ್ಡಬಸಪ್ಪ ರೆಡ್ಡಿ ರವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಈಗಾಗಲೇ ಸರ್ಕಾರದ 16A ರದ್ದಾಗಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ ಜಿಲ್ಲಾ ವರ್ಗಾವಣೆ ಹೋಗಲು ಅವಕಾಶ ಇರುವುದಿಲ್ಲ ಹೀಗಾಗಿ ಪ್ರಸ್ತುತ ಇರುವ ನಿಯೋಜನೆ ಆದೇಶ ರದ್ದುಪಡಿಸಿದಲ್ಲಿ ನೌಕರರು ಹಾಗೂ ಅಧಿಕಾರಿಗಳ ಕುಟುಂಬದ ಮೇಲೆ ದುಷ್ಪರಿಣಾಮ ಬೀರಿ ಮಾನಸಿಕವಾಗಿ ಜರ್ಜರಿತರಾಗುತ್ತಾರೆ.ಹೀಗಾಗಿ ಕೂಡಲೇ ನಿಯೋಜನೆ ಆದೇಶ ರದ್ದುಪಡಿಸುವುದಕ್ಕೆ ತಡೆಹಾಕುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದೇಶ ರದ್ದುಪಡಿಸಿದಲ್ಲಿ ತಂದೆ ತಾಯಿ ಆರೋಗ್ಯ ನೋಡಿಕೊಳ್ಳುವುದು,ಪತಿ ಪತ್ನಿ ನೌಕರರಾಗಿರುವ ಪ್ರಕರಣದಲ್ಲಿ ಒಂದೇ ಕಡೆ ಜೀವಿಸುವುದು ಮಕ್ಕಳ ವಿಧ್ಯಾಭ್ಯಾಸ ಮಾಡಿಸುವುದು,ಅನಾರೋಗ್ಯ ನೌಕರರು ಆರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಕುಟುಂಬದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *