ಜಿಂಕೆ ಮಾಂಸ ಸುಲಿದ ಪ್ರಕರಣ…7 ತಿಂಗಳಾದರೂ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿಗಳು…ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶೇಮ್..ಶೇಮ್…

ಜಿಂಕೆ ಮಾಂಸ ಸುಲಿದ ಪ್ರಕರಣ…7 ತಿಂಗಳಾದರೂ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿಗಳು…ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶೇಮ್..ಶೇಮ್…

ನಂಜನಗೂಡು,ಜು20,Tv10 ಕನ್ನಡ
ನಂಜನಗೂಡು ತಾಲೂಕು ದೊಡ್ಡಕವಲಂದೆ ಅರಣ್ಯ ಪ್ರದೇಶದಲ್ಲಿ ಜಿಂಕೆ ಮಾಂಸ ಸುಲಿದ ಆರೋಪಿಗಳನ್ನ 7 ತಿಂಗಳಾದರೂ ಪತ್ತೆ ಹಚ್ಚುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿದ್ದಾರೆ.18-02-2023 ರಲ್ಲಿ ಪ್ರಕರಣ ದಾಖಲಾಗಿತ್ತು.ರಾತ್ರಿ ಗಸ್ತು ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದರು.ಇಲಾಖೆಯ ವಾಹನ ಕಂಡ ತಕ್ಷಣ ಆರೋಪಿಗಳು ಎಸ್ಕೇಪ್ ಆಗಿದ್ದರು.ಸ್ಥಳದಲ್ಲಿ ಚರ್ಮ ಸುಲಿದ ಜಿಂಕೆ ಕಳೇಬರ,ಮಹೀಂದ್ರ ಜೀಪ್,ಚರ್ಮ ಸುಲಿಯಲು ಬಳಸಿದ ಆಯುಧಗಳನ್ನ ವಶಪಡಿಸಿಕೊಳ್ಳಲಾಗಿತ್ತು.ಪ್ರಕರಣ ನಡೆದು 7 ತಿಂಗಳು ಪೂರ್ಣಗೊಂಡಿದ್ದರೂ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.ದಾಖಲೆಗಳ ಪ್ರಕಾರ ಆರೋಪಿಯನ್ನ ಕೇರಳ ರಾಜ್ಯದ ಪಾಲಕ್ಕಾಡ್ ನ ನಿವಾಸಿ ರಾಜೇಶ್ ಹಾಗೂ ಇತರರು ಎಂದು ನಮೂದಿಸಲಾಗಿದೆ.ಪ್ರಮುಖ ಆರೋಪಿಯ ವಿಳಾಸ ಹಾಗೂ ಹೆಸರು ಪತ್ತೆಯಾಗಿದ್ದರೂ ಬಂಧಿಸಲು ಮೀನಾಮೇಷ ಎಣಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಮೂಡಿದೆ.ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನ ಪತ್ತೆಹಚ್ಚಿ ಬಂಧಿಸುವರೇ…?

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *