ಜಿಂಕೆ ಮಾಂಸ ಸುಲಿದ ಪ್ರಕರಣ…7 ತಿಂಗಳಾದರೂ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿಗಳು…ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶೇಮ್..ಶೇಮ್…

ಜಿಂಕೆ ಮಾಂಸ ಸುಲಿದ ಪ್ರಕರಣ…7 ತಿಂಗಳಾದರೂ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿಗಳು…ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶೇಮ್..ಶೇಮ್…

ನಂಜನಗೂಡು,ಜು20,Tv10 ಕನ್ನಡ
ನಂಜನಗೂಡು ತಾಲೂಕು ದೊಡ್ಡಕವಲಂದೆ ಅರಣ್ಯ ಪ್ರದೇಶದಲ್ಲಿ ಜಿಂಕೆ ಮಾಂಸ ಸುಲಿದ ಆರೋಪಿಗಳನ್ನ 7 ತಿಂಗಳಾದರೂ ಪತ್ತೆ ಹಚ್ಚುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿದ್ದಾರೆ.18-02-2023 ರಲ್ಲಿ ಪ್ರಕರಣ ದಾಖಲಾಗಿತ್ತು.ರಾತ್ರಿ ಗಸ್ತು ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದರು.ಇಲಾಖೆಯ ವಾಹನ ಕಂಡ ತಕ್ಷಣ ಆರೋಪಿಗಳು ಎಸ್ಕೇಪ್ ಆಗಿದ್ದರು.ಸ್ಥಳದಲ್ಲಿ ಚರ್ಮ ಸುಲಿದ ಜಿಂಕೆ ಕಳೇಬರ,ಮಹೀಂದ್ರ ಜೀಪ್,ಚರ್ಮ ಸುಲಿಯಲು ಬಳಸಿದ ಆಯುಧಗಳನ್ನ ವಶಪಡಿಸಿಕೊಳ್ಳಲಾಗಿತ್ತು.ಪ್ರಕರಣ ನಡೆದು 7 ತಿಂಗಳು ಪೂರ್ಣಗೊಂಡಿದ್ದರೂ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.ದಾಖಲೆಗಳ ಪ್ರಕಾರ ಆರೋಪಿಯನ್ನ ಕೇರಳ ರಾಜ್ಯದ ಪಾಲಕ್ಕಾಡ್ ನ ನಿವಾಸಿ ರಾಜೇಶ್ ಹಾಗೂ ಇತರರು ಎಂದು ನಮೂದಿಸಲಾಗಿದೆ.ಪ್ರಮುಖ ಆರೋಪಿಯ ವಿಳಾಸ ಹಾಗೂ ಹೆಸರು ಪತ್ತೆಯಾಗಿದ್ದರೂ ಬಂಧಿಸಲು ಮೀನಾಮೇಷ ಎಣಿಸುತ್ತಿರುವುದು ಏಕೆ ಎಂಬ ಪ್ರಶ್ನೆ ಮೂಡಿದೆ.ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನ ಪತ್ತೆಹಚ್ಚಿ ಬಂಧಿಸುವರೇ…?

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *