ಆಕ್ರೋಶದ ಕೈಗೆ ಬುದ್ಧಿಕೊಟ್ಟು ಅನರ್ಥಕ್ಕೆ ಅವಕಾಶ ಬೇಡ…ಮಣಿಪುರ ಜನತೆಗೆ ಪೇಜಾವರ ಶ್ರೀ ಮನವಿ…

ಮೈಸೂರು,ಜು21,Tv10 ಕನ್ನಡ

ದೇಶದ ಅವಿಭಾಜ್ಯಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ .
ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ ಅವಮಾನವಾಗುತ್ತದೆ .
ಪ್ರಪಂಚದ ಸಮಗ್ರ ಇತಿಹಾಸವನ್ನು ಗಮನಿಸಿದರೆ ಹಿಂಸೆ ಆಕ್ರಮಣ ಅತ್ಯಾಚಾರಗಳಿಂದ ಯಾರೂ ಯಾವ ದೇಶವೂ ಏನನ್ನೂ ಸಾಧಿಸಿಲ್ಲ. ನಮ್ಮ ರಾಮಾಯಣ ಮಹಾಭಾರತಗಳೂ ಅದನ್ನು ಸಾರಿ ಹೇಳಿವೆ .
ಮಣಿಪುರದ ನೆಲದಲ್ಲಿ ಅನಾದಿಕಾಲದಿಂದ ಬದುಕುತ್ತಿರುವ ಎರಡು ಸಮುದಾಯಗಳ ನಡುವೆ ಯಾವುದೋ ಅಭಿಪ್ರಾಯ ಬೇಧಗಳಿಂದ ಹುಟ್ಟಿಕೊಂಡ ಈ ಗಲಭೆ ದಂಗೆಗಳಿಂದ ಏನನ್ನು ಸಾಧಿಸಲು ಹೊರಟಿದ್ದೇವೆ ? ನಮ್ಮ ಮುಂದಿನ ಪೀಳಿಗೆಗೆ ಯಾವ ಸಂದೇಶವನ್ನು ಕೊಡಲು ಹೊರಟಿದ್ದೇವೆ ಎನ್ನುವುದನ್ನು ಯೋಚಿಸಿದ್ದೀರಾ?

ಭಗವದ್ಗೀತೆಯಲ್ಲಿ ಭಗವಾನ್ ಶ್ರೀ ಕೃಷ್ಣ ಹೇಳಿದಂತೆ ಆಕ್ರೋಶದ ಕೈಗೆ ಬುದ್ಧಿಯನ್ನು ಕೊಟ್ಟರೆ ಬುದ್ಧಿನಾಶವಾಗುತ್ತದೆ ಮತ್ತು ಬುದ್ಧಿನಾಶವು ನಮ್ಮೆಲ್ಲರ ನಾಶಕ್ಕೆ ಕಾರಣವಾಗುತ್ತದೆ ಎಂದು ಸಾರಿರುವುದನ್ನು ಗಮನಿಸಬೇಕು . ಆದ್ದರಿಂದ ಇಂಥ ವಿನಾಶಕಾರಿ ಬೆಳವಣಿಗೆಗಳು ಅವಶ್ಯವೇ ಎನ್ನುವುದನ್ನು ಗಲಭೆಯಲ್ಲಿ ತೊಡಗಿಕೊಂಡ ಸಮುದಾಯಗಳ ಮುಖಂಡರು ಅತ್ಯಂತ ತಾಳ್ಮೆ ಸಹನೆಯಿಂದ ವಿವೇಚಿಸಬೇಕು . ಒಬ್ಬನಿಗೆ ಅಥವಾ ಒಂದು ಸಮುದಾಯದ ಮೇಲೆ ಧಾಳಿ ಮಾಡಿ ಹಿಂಸಿಸಿ , ಸಾರ್ವಜನಿಕ ಸೊತ್ತುಳನ್ನು ನಾಶಮಾಡಿ ಏನನ್ನೋ ಸಾಧಿಸಿದ್ದೇವೆಂದು ಹೆಮ್ಮೆ ಪಡಬಹುದು . ಆದರೆ ಆ ಹೆಮ್ಮೆ ಶಾಶ್ವತವೇ ? ನೂರಕ್ಕೆ ನೂರು ಅಲ್ಲ. ಇದು ಮುಂದೆ ಮತ್ತಷ್ಟು ಅನರ್ಥಕಾರಿ ಬೆಳವಣಿಗೆಗಳಿಗೆ ದಾರಿಯಾದೀತು . ಅದೆಲ್ಲಕ್ಕಿಂತ ಹೆಚ್ಚಾಗಿ ಎರಡು ಸಮುದಾಯಗಳ ನಡುವಿನ ಜಗಳದ ಲಾಭವನ್ನು ಪಡೆಯಲು ಮತ್ಯಾರೋ ಹವಣಿಸಬಹುದು . ಆದ್ದರಿಂದ ಮಣಿಪುರದ ಜನತೆ ತಕ್ಷಣ ಹಿಂಸೆಯ ಮಾರ್ಗವನ್ನು ಬಿಟ್ಟು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಸಮಾಲೋಚಿಸಿ ಮಣಿಪುರದ ಮತ್ತು ಭಾರತದ ಭವ್ಯ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪರಿಹರಿಸಿಕೊಂಡು ಇಡೀ ದೇಶಕ್ಕೇ ಒಂದು ಒಳ್ಳೆಯ ಸಂದೇಶವನ್ನು ಕೊಡಬೇಕು ‌. ಮಣಿಪುರ ರಾಜ್ಯದ ಶಾಂತಿ ಸುಭಿಕ್ಷೆ ಪ್ರಗತಿಗೆ ಮಾರಕವಾಗಿರುವ ಇಂಥ ಅಹಿತಕರ ಬೆಳವಣಿಗೆಗಳಿಗೆ ಆಸ್ಪದ ಕೊಡುವುದಿಲ್ಲ ಎಂದು ಎಲ್ಲರೂ ಒಟ್ಟಾಗಿ ಶಪಥಮಾಡಬೇಕು . ನಮ್ಮ ಒಗ್ಗಟ್ಟು ನಮ್ಮ ಶಕ್ತಿ; ನಮ್ಮ ವಿಘಟನೆ ಮತ್ತೊಬ್ಬನ ಶಕ್ತಿ ಯಾಗುತ್ತದೆ ಎನ್ನುವುದನ್ನು ಅರಿತು ಒಗ್ಗಟ್ಟಿನಿಂದ ಮಣಿಪುರ ರಾಜ್ಯದ ಒಳಿತಿಗಾಗಿ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕುವಂತಾಗಲಿ ಎಂದು ಆಶಿಸುತ್ತೇವೆ . ಅವಶ್ಯವಿದ್ದರೆ ಮಣಿಪುರದ ಒಳಿತಿಗಾಗಿ ಯಾವುದೇ ಸಂಧಾನ ಮಾತುಕತೆಗಳಿಗೂ ಮಧ್ಯಸ್ಥಿಕೆ ವಹಿಸಲು ಸಿದ್ಧರಿದ್ದೇವೆ ಎನ್ನುವುದನ್ನೂ ತಿಳಿಸಲು ಬಯಸುತ್ತೇವೆ ‌.

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು
ಶ್ರೀ ಪೇಜಾವರ ಮಠ ಉಡುಪಿ ಕರ್ನಾಟಕ..

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *