*ವಿದ್ಯಾರ್ಥಿ ಜೀವನ ಮಹತ್ವ ಪೂರ್ಣವಾದ ಹಂತ- ಡಿ ಆರ್ ರಮೇಶ್


KR ಪೇಟೆ TV10 ಕನ್ನಡ.ವಿದ್ಯಾರ್ಥಿ ಜೀವನ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಮಹತ್ವವಾದ ಹಂತ .ಈ ಹಂತದಲ್ಲಿ ಶಿಸ್ತು, ಸಂಯಮ, ವಿಧೇಯತೆ , ಕಲಿಕೆ, ಮುಂತಾದ ಉದಾತ್ತ ಮೌಲ್ಯ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಂತಹ ವಿದ್ಯಾರ್ಥಿಗಳು ಉನ್ನತ ಹಂತಕ್ಕೆ ಹೋಗಲು ಸಾಧ್ಯ ಎಂದು ಶ್ರೀ ಡಿ ಆರ್ ರಮೇಶ್ ಹಿರಿಯ ಉಪನ್ಯಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಬಡ್ತಿ ಉಪನ್ಯಾಸಕರ ಸಂಘ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಲೇನಹಳ್ಳಿ ಕೆ.ಆರ್ ಪೇಟೆ ಈ ಕಾಲೇಜಿನ ವಿವಿಧ ಸಾಂಸ್ಕೃತಿಕ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಬಿ ಎಸ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಸಾಧಕರೆಲ್ಲರೂ ಪರಿಶ್ರಮದ ಮೂಲಕ ಸಾಧಕರಾಗಿದ್ದಾರೆ ಹಾಗಾಗಿ ವಿದ್ಯಾರ್ಥಿಗಳು ಶ್ರಮವಹಿಸಿದರೆ ಅದಕ್ಕೆ ಪ್ರತಿಫಲ ಖಂಡಿತವಾಗಿಯೂ ಸಿಗುತ್ತದೆ ಎಂದು ಹೇಳಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾಡಿದ ಕಾಲೇಜಿನ ಪ್ರಾಂಶುಪಾಲರಾದ ಲಯನ್ ದಿನೇಶ್ ರವರು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೊರಹಾಕಲು ಇಂತಹ ಸಾಂಸ್ಕೃತಿಕ ಸಂಘಗಳಿಂದ ಮಾತ್ರ ಸಾಧ್ಯ ಹಾಗಾಗಿ ವಿದ್ಯಾರ್ಥಿಗಳು ಈ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿ,ಎಸ್ ರಾಮು ಉಪನ್ಯಾಸಕರಾದ ಹೆಚ್ .ಎನ್ .ರಂಗರಾಜು ,ಜೆ.ಜಿ. ರಾಜೇಗೌಡ ,ಬೃಂದಾ ವೀಣಾ ಆರ್ ,ಚೈತ್ರ ,ಶೃತಿ ,ಶ್ರೀಕಾಂತ್ ಉಪಸ್ಥಿತರಿದ್ದರು,
ಪ್ರಾರ್ಥನೆ ಸಿಂಧು, ಸ್ವಾಗತ ಶೋಭಿತ, ವಂದನಾರ್ಪಣೆ ಮಹಾಲಕ್ಷ್ಮಿ ಕಾರ್ಯಕ್ರಮದ ನಿರೂಪಣೆಯನ್ನು ರಕ್ಷಿತಾ ಮಾಡಿದರು.

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *