ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಮೈಸೂರು,ಜು21,Tv10 ಕನ್ನಡ
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಾ ಮುಜುಗರ ತರುವ ಯುವಕರಿಗೆ ಕುವೆಂಪುನಗರ ಠಾಣೆ ಪೊಲೀಸರು ಬಿ ಸಿ ಮುಟ್ಟಿಸಿದ್ದಾರೆ. ಯುವಕರಿಗೆ ಟೀ ಕೊಟ್ಟು ಸಿಗರೇಟ್ ಸೇದಲು ಅವಕಾಶ ಕಲ್ಪಿಸಿಕೊಟ್ಟ ಚಾಯ್ ವಾಲಾಗಳಿಗೂ ಬಿಸಿ

ಮುಟ್ಟಿಸಿದ್ದಾರೆ.ಸಿಗರೇಟ್ ಸೇದುತ್ತಾ ಕಾಲಹರಣ ಮಾಡುತ್ತಿದ್ದ ಯುವಕರಿಗೆ ದಂಡ ವಿಧಿಸಲಾಗಿದೆ.ಸ್ಮೋಕ್ ಮಾಡಿದವರಿಗೆ ತಲಾ 100 ರೂ ದಂಡ ವಿಧಿಸಿದರೆ.ಟೀ ಅಂಗಡಿ ಮಾಲೀಕರಿಗೆ 200 ರೂ ದಂಡ ವಿಧಿಸಿದ್ದಾರೆ.ಕುವೆಂಪುನಗರ ಠಾಣಾ ವ್ಯಾಪ್ತಿಯ ಬಹುತೇಕ ಟೀ ಅಂಗಡಿಗಳ ಮುಂದೆ ನಿಂತು ಸಿಗರೇಟ್ ಸೇದಿದ ಯುವಕರು ದಂಡ ತೆತ್ತಿದ್ದಾರೆ.ಸುಮಾರು 15 ದಿನಗಳಲ್ಲಿ 127 ಪ್ರಕರಣಗಳು ದಾಖಲಾಗಿವೆ.ಸಧ್ಯ ಟೀ ಅಂಗಡಿ ಮಾಲೀಕರು ಹಾಗೂ ಸಿಗರೇಟ್ ಸೇವನೆ ಮಾಡಿದ ಯುವಕರು ಸೇರಿದಂತೆ 18,800/- ರೂ ದಂಡ ವಸೂಲಿ ಮಾಡಲಾಗಿದೆ. ಈ ಕಾರ್ಯಾಚರಣೆ ಮತ್ತಷ್ಟು ಮುಂದುವರೆಯಲಿದೆ.ಟೀ ಅಂಗಡಿ ಮುಂದೆ ನಿಂತು ಸಿಗರೇಟ್ ಸೇದುವ ಅಭ್ಯಾಸವಿದ್ದಲ್ಲಿ ಕೂಡಲೇ ಕೈ ಬಿಡಿ ಇಲ್ಲದಿದ್ದಲ್ಲಿ ಪೊಲೀಸರು ಹಾಜರಾಗುವುದು ಗ್ಯಾರೆಂಟಿ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವರ ಸೂಚನೆ ಮೇರೆಗೆ ಹಾಗೂ ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಂತೆ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್ ರವರು ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುವವರ ವಿರುದ್ದ ಸಮರ ಸಾರಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *