ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಮೈಸೂರು,ಜು21,Tv10 ಕನ್ನಡ
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಾ ಮುಜುಗರ ತರುವ ಯುವಕರಿಗೆ ಕುವೆಂಪುನಗರ ಠಾಣೆ ಪೊಲೀಸರು ಬಿ ಸಿ ಮುಟ್ಟಿಸಿದ್ದಾರೆ. ಯುವಕರಿಗೆ ಟೀ ಕೊಟ್ಟು ಸಿಗರೇಟ್ ಸೇದಲು ಅವಕಾಶ ಕಲ್ಪಿಸಿಕೊಟ್ಟ ಚಾಯ್ ವಾಲಾಗಳಿಗೂ ಬಿಸಿ

ಮುಟ್ಟಿಸಿದ್ದಾರೆ.ಸಿಗರೇಟ್ ಸೇದುತ್ತಾ ಕಾಲಹರಣ ಮಾಡುತ್ತಿದ್ದ ಯುವಕರಿಗೆ ದಂಡ ವಿಧಿಸಲಾಗಿದೆ.ಸ್ಮೋಕ್ ಮಾಡಿದವರಿಗೆ ತಲಾ 100 ರೂ ದಂಡ ವಿಧಿಸಿದರೆ.ಟೀ ಅಂಗಡಿ ಮಾಲೀಕರಿಗೆ 200 ರೂ ದಂಡ ವಿಧಿಸಿದ್ದಾರೆ.ಕುವೆಂಪುನಗರ ಠಾಣಾ ವ್ಯಾಪ್ತಿಯ ಬಹುತೇಕ ಟೀ ಅಂಗಡಿಗಳ ಮುಂದೆ ನಿಂತು ಸಿಗರೇಟ್ ಸೇದಿದ ಯುವಕರು ದಂಡ ತೆತ್ತಿದ್ದಾರೆ.ಸುಮಾರು 15 ದಿನಗಳಲ್ಲಿ 127 ಪ್ರಕರಣಗಳು ದಾಖಲಾಗಿವೆ.ಸಧ್ಯ ಟೀ ಅಂಗಡಿ ಮಾಲೀಕರು ಹಾಗೂ ಸಿಗರೇಟ್ ಸೇವನೆ ಮಾಡಿದ ಯುವಕರು ಸೇರಿದಂತೆ 18,800/- ರೂ ದಂಡ ವಸೂಲಿ ಮಾಡಲಾಗಿದೆ. ಈ ಕಾರ್ಯಾಚರಣೆ ಮತ್ತಷ್ಟು ಮುಂದುವರೆಯಲಿದೆ.ಟೀ ಅಂಗಡಿ ಮುಂದೆ ನಿಂತು ಸಿಗರೇಟ್ ಸೇದುವ ಅಭ್ಯಾಸವಿದ್ದಲ್ಲಿ ಕೂಡಲೇ ಕೈ ಬಿಡಿ ಇಲ್ಲದಿದ್ದಲ್ಲಿ ಪೊಲೀಸರು ಹಾಜರಾಗುವುದು ಗ್ಯಾರೆಂಟಿ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವರ ಸೂಚನೆ ಮೇರೆಗೆ ಹಾಗೂ ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಂತೆ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್ ರವರು ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುವವರ ವಿರುದ್ದ ಸಮರ ಸಾರಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *