ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕರಣ… ನ್ಯಾಯಾಂಗ ತನಿಖಾ ಆಯೋಗ ರಚನೆ…ಸರ್ಕಾರದಿಂದ ಅಧಿಸೂಚನೆ…

ಬೆಂಗಳೂರು,ಜು21,Tv10 ಕನ್ನಡ
2021 ರಲ್ಲಿ ನಡೆದ ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕ್ರಿಯೆ ಪ್ರಕರಣದ ತನಿಖೆಗೆ ಸರ್ಕಾರ ನ್ಯಾಯಾಂಗ ತನಿಖಾ ಆಯೋಗವನ್ನ ನೇಮಕ ಮಾಡಿದೆ.ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗವನ್ನ ರಚಿಸಲಾಗಿದೆ.545 ಪಿಎಸ್ಸೈ ಗಳ ನೇರನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಈ ಕುರಿತಂತೆ ನ್ಯಾಯಾಂಗ ತನಿಖೆ ಅತ್ಯವಶ್ಯಕವೆಂಬುದನ್ನ ಮನಗಂಡು ವಿಚಾರಣಾ ಆಯೋಗವನ್ನ ರಚಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಗಳನ್ನ ಉಲ್ಲಂಘಿಸಲಾಗಿದೆಯೇ,ಅಂತಹ ಅಕ್ರಮ ಯಾವುದು,ಹೇಗೆವುಲ್ಲಂಘನೆ ಆಗಿದೆ,ಯಾವಹಂತದಲ್ಲಿ ಅಕ್ರಮ ನಡೆದಿದೆ,ಇದರಲ್ಲಿ ದುರ್ಲಾಭ ಪಡೆದ ವ್ಯಕ್ತಿಗಳು ಯಾರು,ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ಹಾಗೂ ಲೋಪರಹಿತವಾಗಿ ನೇಮಕಾತಿ ಪ್ರಕ್ರಿಯೆಯನ್ನ ನಡೆಸಲು ಸರ್ಕಾರ ಕೈಗೊಳ್ಳಬಹುದಾದ ಕ್ರಮಗಳು ಯಾವುದು ಈ ಎಲ್ಲಾ ವಿಚಾರಗಳನ್ನ ಪರಿಶೀಲಿಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಮನವಿ ಮಾಡಲಾಗಿದೆ.ಸರ್ಕಾರದ ಅ್ಈನ ಕಾರ್ಯದರ್ಶಿ ಎಸ್.ಆರ್.ಬಾಣದರಂಗಯ್ಯ ರವರು ಅಧಿಸೂಚನೆ ಹೊರಡಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *