ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕರಣ… ನ್ಯಾಯಾಂಗ ತನಿಖಾ ಆಯೋಗ ರಚನೆ…ಸರ್ಕಾರದಿಂದ ಅಧಿಸೂಚನೆ…

ಬೆಂಗಳೂರು,ಜು21,Tv10 ಕನ್ನಡ
2021 ರಲ್ಲಿ ನಡೆದ ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕ್ರಿಯೆ ಪ್ರಕರಣದ ತನಿಖೆಗೆ ಸರ್ಕಾರ ನ್ಯಾಯಾಂಗ ತನಿಖಾ ಆಯೋಗವನ್ನ ನೇಮಕ ಮಾಡಿದೆ.ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗವನ್ನ ರಚಿಸಲಾಗಿದೆ.545 ಪಿಎಸ್ಸೈ ಗಳ ನೇರನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಈ ಕುರಿತಂತೆ ನ್ಯಾಯಾಂಗ ತನಿಖೆ ಅತ್ಯವಶ್ಯಕವೆಂಬುದನ್ನ ಮನಗಂಡು ವಿಚಾರಣಾ ಆಯೋಗವನ್ನ ರಚಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಗಳನ್ನ ಉಲ್ಲಂಘಿಸಲಾಗಿದೆಯೇ,ಅಂತಹ ಅಕ್ರಮ ಯಾವುದು,ಹೇಗೆವುಲ್ಲಂಘನೆ ಆಗಿದೆ,ಯಾವಹಂತದಲ್ಲಿ ಅಕ್ರಮ ನಡೆದಿದೆ,ಇದರಲ್ಲಿ ದುರ್ಲಾಭ ಪಡೆದ ವ್ಯಕ್ತಿಗಳು ಯಾರು,ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ಹಾಗೂ ಲೋಪರಹಿತವಾಗಿ ನೇಮಕಾತಿ ಪ್ರಕ್ರಿಯೆಯನ್ನ ನಡೆಸಲು ಸರ್ಕಾರ ಕೈಗೊಳ್ಳಬಹುದಾದ ಕ್ರಮಗಳು ಯಾವುದು ಈ ಎಲ್ಲಾ ವಿಚಾರಗಳನ್ನ ಪರಿಶೀಲಿಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಮನವಿ ಮಾಡಲಾಗಿದೆ.ಸರ್ಕಾರದ ಅ್ಈನ ಕಾರ್ಯದರ್ಶಿ ಎಸ್.ಆರ್.ಬಾಣದರಂಗಯ್ಯ ರವರು ಅಧಿಸೂಚನೆ ಹೊರಡಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *