ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕರಣ… ನ್ಯಾಯಾಂಗ ತನಿಖಾ ಆಯೋಗ ರಚನೆ…ಸರ್ಕಾರದಿಂದ ಅಧಿಸೂಚನೆ…

ಬೆಂಗಳೂರು,ಜು21,Tv10 ಕನ್ನಡ
2021 ರಲ್ಲಿ ನಡೆದ ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕ್ರಿಯೆ ಪ್ರಕರಣದ ತನಿಖೆಗೆ ಸರ್ಕಾರ ನ್ಯಾಯಾಂಗ ತನಿಖಾ ಆಯೋಗವನ್ನ ನೇಮಕ ಮಾಡಿದೆ.ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗವನ್ನ ರಚಿಸಲಾಗಿದೆ.545 ಪಿಎಸ್ಸೈ ಗಳ ನೇರನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಈ ಕುರಿತಂತೆ ನ್ಯಾಯಾಂಗ ತನಿಖೆ ಅತ್ಯವಶ್ಯಕವೆಂಬುದನ್ನ ಮನಗಂಡು ವಿಚಾರಣಾ ಆಯೋಗವನ್ನ ರಚಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಗಳನ್ನ ಉಲ್ಲಂಘಿಸಲಾಗಿದೆಯೇ,ಅಂತಹ ಅಕ್ರಮ ಯಾವುದು,ಹೇಗೆವುಲ್ಲಂಘನೆ ಆಗಿದೆ,ಯಾವಹಂತದಲ್ಲಿ ಅಕ್ರಮ ನಡೆದಿದೆ,ಇದರಲ್ಲಿ ದುರ್ಲಾಭ ಪಡೆದ ವ್ಯಕ್ತಿಗಳು ಯಾರು,ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ಹಾಗೂ ಲೋಪರಹಿತವಾಗಿ ನೇಮಕಾತಿ ಪ್ರಕ್ರಿಯೆಯನ್ನ ನಡೆಸಲು ಸರ್ಕಾರ ಕೈಗೊಳ್ಳಬಹುದಾದ ಕ್ರಮಗಳು ಯಾವುದು ಈ ಎಲ್ಲಾ ವಿಚಾರಗಳನ್ನ ಪರಿಶೀಲಿಸಿ ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಮನವಿ ಮಾಡಲಾಗಿದೆ.ಸರ್ಕಾರದ ಅ್ಈನ ಕಾರ್ಯದರ್ಶಿ ಎಸ್.ಆರ್.ಬಾಣದರಂಗಯ್ಯ ರವರು ಅಧಿಸೂಚನೆ ಹೊರಡಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *